ಮಂಗಳೂರು,ಫೆ.21: ಅನಿವಾಸಿ ಕನ್ನಡಿಗರ ಬಹು ನಿರೀಕ್ಷಿತ ಬೇಡಿಕೆಯೊಂದು ಈಡೇರುತ್ತಿದೆ. ಮಂಗಳೂರು ಮತ್ತು ಸೌದಿ ಅರೇಬಿಯಾದ ಜಿದ್ದಾ ನಡುವೆ ನೇರ ವಿಮಾನಯಾನವು ಆರಂಭಗೊಳ್ಳಲಿದೆ.
ಮುಂದಿನ ಮಾರ್ಚ್ ತಿಂಗಳ 2 ರಿಂದ ವಿಮಾನ ಸೇವೆ ಆರಂಭಗೊಳ್ಳುವುದಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರಕಟಿಸಿದ್ದಾಗಿ ಟ್ರಾವೆಲ್ ಏಜೆನ್ಸಿಗಳು ಮಾಹಿತಿ ನೀಡಿದ್ದಾರೆ. ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ನಲ್ಲಿ ಜಿದ್ದಾ ಮತ್ತು ಮಂಗಳೂರು ನಡುವಿನ ಬುಕಿಂಗ್ ಆರಂಭಗೊಂಡಿದೆ. ಮಾರ್ಚ್ ತಿಂಗಳ 2, 9, 16 ಮತ್ತು 23 ದಿನಾಂಕಗಳಲ್ಲಿ ಜಿದ್ದಾದಿಂದಲೂ, ಅದೇ ದಿನ ಮಂಗಳೂರಿನಿಂದಲೂ ವಿಮಾನ ಲಭ್ಯವಿದೆ.
ಮಂಗಳೂರಿನಿಂದ ಬೆಳಿಗ್ಗೆ 08-55 ಕ್ಕೆ ಹೊರಟು ಸೌದಿ ಸಮಯ ಮಧ್ಯಾಹ್ನ 12-45 ಕ್ಕೆ ಜಿದ್ದಾ ತಲುಪಲಿದೆ. ಜಿದ್ದಾದಿಂದ ಮಧ್ಯಾಹ್ನ 1-45 ಕ್ಕೆ ಹೊರಟು ರಾತ್ರಿ 9.40 ಕ್ಕೆ ಮಂಗಳೂರು ತಲುಪಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ನ ವೆಬ್ಸೈಟ್ನಲ್ಲಿ, ಮಂಗಳೂರಿನಿಂದ 30,812 ರೂಪಾಯಿ ಹಾಗೂ ಜಿದ್ದಾದಿಂದ 16,121 ರೂಪಾಯಿ ಟಿಕೆಟ್ ದರ ನಿಗದಿಪಡಿಸಲಾಗಿದೆ.
ಉಮ್ರಾ ಹಾಗೂ ಇತರ ಯಾತ್ರಿಕರ ಅನುಕೂಲಕ್ಕಾಗಿ ಮಂಗಳೂರಿನಿಂದ ಜಿದ್ದಾ ಅಥವಾ ಮದೀನಾಕ್ಕೆ ನೇರ ವಿಮಾನ ಯಾನದ ವ್ಯವಸ್ಥೆ ಕಲ್ಪಿಸುವಂತೆ ಹಜ್ ಮತ್ತು ಉಮ್ರಾ ಟೂರ್ ಏಜೆನ್ಸಿಗಳು ಸೇರಿದಂತೆ ವಲಸಿಗ ಕನ್ನಡಿಗರು ಹಾಗೂ ನೆರೆರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯ ಪ್ರಯಾಣಿಕರ ಬೇಡಿಕೆಯಾಗಿತ್ತು.
ಇಲ್ಲಿಂದ ಉಮ್ರಾ ನಿರ್ವಹಿಸಲು ಬೆಂಗಳೂರು, ಕೋಝಿಕ್ಕೋಡ್ ಅಥವಾ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅವಲಂಬಿಸಬೇಕಿತ್ತು. ಇದಲ್ಲದೆ ಅನಿವಾಸಿ ಭಾರತೀಯ ಉದ್ಯಮಿಗಳು, ಸೌದಿಯಲ್ಲಿರುವ ಉದ್ಯೋಗಸ್ಥರು ಹಾಗೂ ಇತರ ಪ್ರಯಾಣಿಕರಿಗೆ ಮಂಗಳೂರು ಜಿದ್ದಾ ನೇರ ಬಹಳ ಪ್ರಯೋಜನಕಾರಿ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ