janadhvani

Kannada Online News Paper

ಸ್ಕಾರ್ಫ್ ಸಮಸ್ಯೆ: ಮಲ್ಪೆ ಬಿಸ್ಮಿಲ್ಲಾ ಹೋಟೇಲ್ ಮೇಲೆ ದಾಳಿ – ಖಂಡನೀಯ

ಉಡುಪಿ: ಸ್ಕಾರ್ಫ್ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಖಂಡನೀಯ
ಮೂಲಭೂತ ಹಕ್ಕಾಗಿರುವ ಹಿಜಾಬನ್ನು ತರಗತಿಯಲ್ಲಿ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೊಟೇಲ್’ ಒಂದು ಗುಂಪು ಕಲ್ಲು ತೂರಾಟ ನಡೆಸಿದೆ. ಇದರಿಂದ ರೆಸ್ಟೋರೆಂಟ್‌ನ ಕಿಟಕಿ ಗಾಜುಗಳಿಗೆ ಹಾನಿ ಮಾಡಿದೆ.

ದುಷ್ಕರ್ಮಿಗಳ ಗುಂಪು ವಿಧ್ಯಾರ್ಥಿನಿಯ ಸಹೋದರ ಸೈಫ್ ಎಂಬವರ ಮೇಲೂ ಹಲ್ಲೆ ನಡೆಸಿದೆ ಈ ಒಂದು ಘಟನೆಯನ್ನು ಕರ್ನಾಟಕ ಮುಸ್ಲಿಂ ಜಮಾಅತ್, ಸಂಯುಕ್ತ ಜಮಾಅತ್, ಎಸ್ ವೈ ಎಸ್ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸಂಘಟನೆಗಳ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ತೀವ್ರವಾಗಿ ಖಂಡಿಸಿದ್ದಾರೆ.

ಈ ದುಷ್ಕರ್ಮಿಗಳನ್ನು ಕಂಡುಹಿಡಿದು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.