ಉಡುಪಿ: ಹೈಕೋರ್ಟ್ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಅಂತಿಮ ಆದೇಶ ಬರುವವರೆಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಿಯಾ ಅಸಾದಿ ಒತ್ತಾಯಿಸಿದರು.
ಬುಧವಾರ ಸಹಪಾಠಿಗಳ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪ್ರಾಯೋಗಿಕ ಪರೀಕ್ಷೆಯನ್ನು ಆನ್ಲೈನ್ನಲ್ಲಿ ಬರೆಯಲು ಸಾಧ್ಯವಿಲ್ಲದ್ದರಿಂದ ಅಂತಿಮ ಆದೇಶದವರೆಗೂ ಮುಂದೂಡಬೇಕು. ಈ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು.
‘ಹಿಜಾಬ್ ಕಾರಣದಿಂದ ರಾಜ್ಯದಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದ್ದು, ನಮ್ಮ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಶೀಘ್ರ ಅಂತಿಮ ಆದೇಶ ಬರಬೇಕು’ ಎಂದು ಆಲಿಯಾ ಆಗ್ರಹಿಸಿದರು.
‘ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿ ಸೋರಿಕೆಯಾದ ಬಳಿಕ ಅಪರಿಚಿತರಿಂದ ಹೆಚ್ಚಾಗಿ ಕರೆಗಳು ಬರುತ್ತಿದ್ದು, ಅವಾಚ್ಯವಾಗಿ ನಿಂದಿಸಲಾಗುತ್ತಿದೆ. ಮಾಧ್ಯಮಗಳಿಂದಲೂ ಖಾಸಗಿತನಕ್ಕೆ ಧಕ್ಕೆಯಾಗಿದೆ. ಕೆಲವರು ವಿಡಿಯೋಗಳನ್ನು ವೈರಲ್ ಮಾಡಿ ವಿಕೃತಿ ಪ್ರದರ್ಶಿಸುತ್ತಿದ್ದಾರೆ’ ಎಂದು ಆಲ್ಮಾ ಅಸಮಾಧಾನ ವ್ಯಕ್ತಪಡಿಸಿದರು.
ಸಹಪಾಠಿ ಹಾಜ್ರಾ ಶಿಫಾಳ ಪೋಷಕರ ಹೋಟೆಲ್ ಮೇಲೆ ದಾಳಿ ನಡೆಸಿ, ಅಣ್ಣನ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಯಿಂದ ಶಿಫಾ ಮಾನಸಿಕವಾಗಿ ಜರ್ಜರಿತಗೊಂಡಿದ್ದು ಮನೆಯಿಂದ ಹೊರಬರುತ್ತಿಲ್ಲ. ಹಲ್ಲೆ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಿಜಾಬ್ ಹೋರಾಟದಲ್ಲಿ ಅನವಶ್ಯಕವಾಗಿ ಕುಟುಂಬವನ್ನು ಎಳೆದು ತರಬಾರದು, ಮಾಧ್ಯಮಗಳು ಖಾಸಗಿತನವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.
ಹೈಕೋರ್ಟ್ನಲ್ಲಿ ಹಿಜಾಬ್ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಬರದಿದ್ದರೆ ಸುಪ್ರಿಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಹಿಜಾಬ್ಗಾಗಿ ಮುಸ್ಲಿಂ ಹೆಣ್ಣುಮಕ್ಕಳು ಕಾಲೇಜಿನ ಗೇಟ್ ಹೊರಗೆ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿವಾದ ಶೀಘ್ರ ಬಗೆಹರಿಯಬೇಕು ಎಂದು ವಿದ್ಯಾರ್ಥಿನಿ ರೇಶಮ್ ಒತ್ತಾಯಿಸಿದರು.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)