ಅಬುಧಾಬಿ: ಯುಎಇಯ ಎಲ್ಲಾ ವಿಮಾನ ನಿಲ್ದಾಣಗಳಿಗೆ ಭಾರತದಿಂದ ಪ್ರಯಾಣಿಸುವವರಿಗೆ ರಾಪಿಡ್ ಪಿಸಿಆರ್ ಪರೀಕ್ಷೆಯನ್ನು ಮನ್ನಾ ಮಾಡಲಾಗಿದೆ. ಈ ಹಿಂದೆ ದುಬೈ, ಶಾರ್ಜಾ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ವಿನಾಯಿತಿಗಳನ್ನು ಘೋಷಿಸಲಾಗಿತ್ತು. ಆದರೆ, ರಾಸಲ್ ಖೈಮಾ ಮತ್ತು ಅಬುಧಾಬಿಗೂ ವಿನಾಯಿತಿ ಇರಲಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸುತ್ತೋಲೆಯಲ್ಲಿ ತಿಳಿಸಿದೆ.
ಭಾರತದಿಂದ ಯುಎಇಗೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮಿಸುವ ಮೊದಲು ಭಾರತೀಯ ವಿಮಾನ ನಿಲ್ದಾಣಗಳಲ್ಲಿನ ಕ್ಷಿಪ್ರ ಪಿಸಿಆರ್ ತಪಾಸಣೆಯನ್ನು ರದ್ದುಗೊಳಿಸಲಾಗಿದೆ, ಆದರೆ ಇತರ ಪ್ರಯಾಣದ ಷರತ್ತುಗಳನ್ನು ಪಾಲಸಬೇಕೆಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.
ಅಬುಧಾಬಿಯ ಅಧಿಕೃತ ವಿಮಾನಯಾನ ಸಂಸ್ಥೆಯಾದ ಇತ್ತಿಹಾದ್ ಕೂಡ ಕ್ಷಿಪ್ರ ಪಿಸಿಆರ್ ಪರೀಕ್ಷೆಯ ಅಗತ್ಯವನ್ನು ಕೈಬಿಡಲಾಗಿದೆ ಎಂದು ಪ್ರಕಟಿಸಿದೆ. ಆದಾಗ್ಯೂ, 48 ಗಂಟೆಗಳ ಒಳಗೆ ಆರ್ಟಿ ಪಿಸಿಆರ್ ಪರೀಕ್ಷೆಯ ಅವಶ್ಯಕತೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಪ್ರವಾಸದ ಆರು ಗಂಟೆಯೊಳಗೆ ರಾಪಿಡ್ ಪಿಸಿಆರ್ ಪರೀಕ್ಷೆಯು ಪ್ರಯಾಣಿಕರಿಗೆ ಬಿಕ್ಕಟ್ಟು ಸೃಷ್ಟಿಸಿತ್ತು. ಹೊರಗಿನ ಲ್ಯಾಬ್ಗಳ ಕೋವಿಡ್ ರಿಪೋರ್ಟ್ ನೆಗೆಟಿವ್ ಇದ್ದರೂ, ವಿಮಾನ ನಿಲ್ದಾಣದಲ್ಲಿನ ರಾಪಿಡ್ ಟೆಸ್ಟ್ನಲ್ಲಿ ಪಾಸಿಟಿವ್ ಆಗಿ ಪ್ರಯಾಣ ಮೊಟಕುಗೊಂಡ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಈ ಷರತ್ತನ್ನು ಕೈಬಿಡಲಾಗಿದ್ದು, ವಲಸಿಗರು ನಿಟ್ಟುಸಿರು ಬಿಡುವಂತಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ