ಅಬುಧಾಬಿ: ಯುಎಇಯ ಎಲ್ಲಾ ವಿಮಾನ ನಿಲ್ದಾಣಗಳಿಗೆ ಭಾರತದಿಂದ ಪ್ರಯಾಣಿಸುವವರಿಗೆ ರಾಪಿಡ್ ಪಿಸಿಆರ್ ಪರೀಕ್ಷೆಯನ್ನು ಮನ್ನಾ ಮಾಡಲಾಗಿದೆ. ಈ ಹಿಂದೆ ದುಬೈ, ಶಾರ್ಜಾ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ವಿನಾಯಿತಿಗಳನ್ನು ಘೋಷಿಸಲಾಗಿತ್ತು. ಆದರೆ, ರಾಸಲ್ ಖೈಮಾ ಮತ್ತು ಅಬುಧಾಬಿಗೂ ವಿನಾಯಿತಿ ಇರಲಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸುತ್ತೋಲೆಯಲ್ಲಿ ತಿಳಿಸಿದೆ.
ಭಾರತದಿಂದ ಯುಎಇಗೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮಿಸುವ ಮೊದಲು ಭಾರತೀಯ ವಿಮಾನ ನಿಲ್ದಾಣಗಳಲ್ಲಿನ ಕ್ಷಿಪ್ರ ಪಿಸಿಆರ್ ತಪಾಸಣೆಯನ್ನು ರದ್ದುಗೊಳಿಸಲಾಗಿದೆ, ಆದರೆ ಇತರ ಪ್ರಯಾಣದ ಷರತ್ತುಗಳನ್ನು ಪಾಲಸಬೇಕೆಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.
ಅಬುಧಾಬಿಯ ಅಧಿಕೃತ ವಿಮಾನಯಾನ ಸಂಸ್ಥೆಯಾದ ಇತ್ತಿಹಾದ್ ಕೂಡ ಕ್ಷಿಪ್ರ ಪಿಸಿಆರ್ ಪರೀಕ್ಷೆಯ ಅಗತ್ಯವನ್ನು ಕೈಬಿಡಲಾಗಿದೆ ಎಂದು ಪ್ರಕಟಿಸಿದೆ. ಆದಾಗ್ಯೂ, 48 ಗಂಟೆಗಳ ಒಳಗೆ ಆರ್ಟಿ ಪಿಸಿಆರ್ ಪರೀಕ್ಷೆಯ ಅವಶ್ಯಕತೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಪ್ರವಾಸದ ಆರು ಗಂಟೆಯೊಳಗೆ ರಾಪಿಡ್ ಪಿಸಿಆರ್ ಪರೀಕ್ಷೆಯು ಪ್ರಯಾಣಿಕರಿಗೆ ಬಿಕ್ಕಟ್ಟು ಸೃಷ್ಟಿಸಿತ್ತು. ಹೊರಗಿನ ಲ್ಯಾಬ್ಗಳ ಕೋವಿಡ್ ರಿಪೋರ್ಟ್ ನೆಗೆಟಿವ್ ಇದ್ದರೂ, ವಿಮಾನ ನಿಲ್ದಾಣದಲ್ಲಿನ ರಾಪಿಡ್ ಟೆಸ್ಟ್ನಲ್ಲಿ ಪಾಸಿಟಿವ್ ಆಗಿ ಪ್ರಯಾಣ ಮೊಟಕುಗೊಂಡ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಈ ಷರತ್ತನ್ನು ಕೈಬಿಡಲಾಗಿದ್ದು, ವಲಸಿಗರು ನಿಟ್ಟುಸಿರು ಬಿಡುವಂತಾಗಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು