ಗುಜರಾತ್: ದೇಶವನ್ನು ಅಸ್ಥಿರಗೊಳಿಸುವ ಕ್ರಮಗಳನ್ನು ಸಂವಿಧಾನ ಬದ್ಧವಾಗಿ ವಿರೋಧಿಸಬೇಕು.ಅದಾಗಿದೆ ನೈಜ ನಾಗರಿಕ ಪ್ರಜ್ಞೆ. ಧರ್ಮ ಅಥವಾ ರಾಜಕೀಯದ ಹೆಸರಿನಲ್ಲಿ ಜನರನ್ನು ವಿಭಜಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವ ಶಕ್ತಿ ಭಾರತದ ಸಂವಿಧಾನಕ್ಕಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಹಿಂಸೆ ಮತ್ತು ಭ್ರಷ್ಟಾಚಾರದಿಂದ ಸಾಧಿಸಿದ ಯಾವುದೇ ಯಶಸ್ಸು ಕೇವಲ ತಾತ್ಕಾಲಿಕ. ಸರ್ಕಾರಗಳು ಸಂವಾದದ ಮೂಲಕ ಜನರ ಆಶೋತ್ತರಗಳನ್ನು ಮುಟ್ಟಬೇಕೇ ಹೊರತು ದಮನದಿಂದಲ್ಲ ಎಂದು ಕಾಂತಪುರಂ ಹೇಳಿದರು. ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಎಸ್ಎಸ್ಎಫ್ ರಾಷ್ಟ್ರೀಯ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡತ್ತಿದ್ದರು.
ಫೆ.22 ರಿಂದ ಪ್ರಾರಂಭಗೊಂಡ ಎಸ್ಸೆಸ್ಸೆಫ್ ರಾಷ್ಟ್ರೀಯ ಸಾಹಿತ್ಯೋತ್ಸವವು ಗುಜರಾತಿನ ರಾಜ್ಕೋಟ್ ಸಮಾಪ್ತಿ ಗೊಂಡಿತು. ದೇಶದ 24 ರಾಜ್ಯಗಳು ಈ ಸಾಹಿತ್ಯೋತ್ಸವ್ನಲ್ಲಿ ಭಾಗಿಯಾಗಿತ್ತು. ವಿವಿಧ ಅಕಾಡೆಮಿಕ್ ಚರ್ಚೆಗಳು, ಸಾಹಿತ್ಯ ಸಂವಾದಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳೊಂದಿಗೆ ಸಂಪನ್ನವಾದ ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪ್ರೊಫೆಸರ್ ಅಖ್ತರ್ ವಾಸಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಕಾಶ್ಮೀರದಿಂದ ಕನ್ಯಾಕುಮಾರಿ ವರೆಗಿನ ಇಪ್ಪತ್ತನಾಲ್ಕು ರಾಜ್ಯಗಳು ಭಾಗವಹಿಸಿದ ದೇಶದ ಸುನ್ನಿ ವಿದ್ಯಾರ್ಥಿಗಳ ಅತೀ ದೊಡ್ದ ಸ್ಪರ್ಧೆಯಲ್ಲಿ ಉತ್ತಮ ಸಾಧನೆಯನ್ನು ತೋರ್ಪಡಿಸಿ, ಚೊಚ್ಚಲ ಸಾಹಿತ್ಯ ಕಿರೀಟವನ್ನು ಕಾಶ್ಮೀರ ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಕರ್ನಾಟಕ ಹಾಗೂ ತೃತೀಯ ಸ್ಥಾನವನ್ನು ಕೇರಳ ಅಲಂಕರಿಸಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ