ಉಡುಪಿ: ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಂಶುಪಾಲರೇ ಪೊಲೀಸ್ ದೂರು ಕೊಡುವುದಾಗಿ ಎಚ್ಚರಿಸಿದ ಘಟನೆ ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಸೋಮವಾರದ ಪ್ರಾಕ್ಟಿಕಲ್ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಅವರನ್ನು ಪರೀಕ್ಷೆಗ ಕೂರಿಸಲು ಅವಕಾಶ ನಿರಾಕರಿಸಿದ್ದಲ್ಲದೇ, ಹೊರಹೋಗುವಂತೆ ಪ್ರಾಂಶುಪಾಲರು ಎಚ್ಚರಿಕೆ ನೀಡಿ ಹೊರಗೆ ಕಳಿಸಿದ್ದಾರೆ ಎನ್ನಲಾಗಿದೆ.
ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದಿರುವ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿ ಅಲ್ಮಾಸ್ ಎ.ಎಚ್. ಟ್ವೀಟ್ ಮಾಡಿದ್ದು, ‘ನಮ್ಮ ಪೈಕಿ ನಾನು ಸೇರಿದಂತೆ ಮೂವರು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ ಇಂದಿನ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನೀಡಿಲ್ಲ. ನಮ್ಮ ಮೇಲೆ ಪೊಲೀಸ್ ದೂರು ನೀಡುವುದಾಗಿ ಹಿಂದೆ ಕಳುಹಿಸಿದ್ದಾರೆ’ ಎಂದು ಆರೋಪಿಸಿದ್ದಾರೆ.
‘ನಾವು ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿಯೇ ಕಾಲೇಜಿಗೆ ಹೋಗಿದ್ದೆವು. ಕಾಲೇಜು ತಲುಪಿದಾಗ ನಮ್ಮ ಪ್ರಾಂಶುಪಾಲರು ನೀವು ಇಲ್ಲಿಂದ ಐದು ನಿಮಿಷದಲ್ಲಿ ಹೊರಡಬೇಕು. ಇಲ್ಲವಾದಲ್ಲಿ ನಾನು ಪೊಲೀಸ್ ಕಂಪ್ಲೇಂಟ್ ಕೊಡುತ್ತೇನೆ ಎಂದು ಎಚ್ಚರಿಸಿದ್ದಾರೆ’ ಎಂದು ಅಲ್ಮಾಸ್ ಹೇಳಿದ್ದಾರೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡುವಂತೆ ಹೈಕೋರ್ಟ್ ಮೆಟ್ಟಿಲು ಏರಿರುವವರ ಪೈಕಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಲ್ಮಾಝ್, ಹಝ್ರ ಶಿಫಾ ಹಾಗೂ ಬೀಬಿ ಆಯಿಶಾ ಅವರು ದ್ವಿತೀಯ ಪಿಯು ವಿದ್ಯಾರ್ಥಿನಿಯರಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ