
ಉಡುಪಿ : ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಹುತಾತ್ಮರ ಸ್ಮಾರಕ, ಅಜ್ಜರಕಾಡಿನಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.
ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ,ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ ಯುದ್ದಪೀಡಿತ ರಾಷ್ಟ್ರದಲ್ಲಿ ಜೀವಭಯದಿಂದ ಕಂಗಾಲಾಗಿದ್ದಾರೆ. ಆ ಪೈಕಿ ರಾಜ್ಯದ ನವೀನ್ ಎಂಬ ವಿದ್ಯಾರ್ಥಿ ರಷ್ಯಾದ ರಾಕೆಟ್ ದಾಳಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಪ್ರಜೆಗಳ ರಕ್ಷಿಸುವಲ್ಲಿ ವಿಫಲವಾಗಿದೆ.
ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕದನ ಪೀಡಿತ ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಸಹಿತ ಎಲ್ಲರನ್ನೂ ರಕ್ಷಣೆ ಮಾಡಬೇಕು. ದೇಶದ ಜನರು ವಿದೇಶಗಳಲ್ಲಿ ಜೀವದ ಅಪಾಯವನ್ನೆದುರಿಸುವಾಗ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಬೇಜವಾಬ್ದಾರಿಯಿಂದ ವರ್ತಿಸುವ ಪರಿಣಾಮವೇ ಕರ್ನಾಟಕ ಇಂದು ಒಂದು ಅಮೂಲ್ಯ ಜೀವವನ್ನು ಕಳೆದುಕೊಂಡಿದೆ. ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು ಎಂದು ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ನವಾಝ್ ಶೇಖ್ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಅಧ್ಯಕ್ಷರು ಅಸೀಲ್ ಅಕ್ರಮ್,ಜಿಲ್ಲಾ ಕಾರ್ಯದರ್ಶಿ ಸಾದಿಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ
ಬೆಳ್ತಂಗಡಿ : ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ ನಾಸಿರ್ ಬಂಗೇರಕಟ್ಟೆ ,ಭಾಕಿರ್ ಪುಂಜಾಲಕಟ್ಟೆ ,ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ