ಎರ್ನಾಕುಳಂ: ಪ್ರಮುಖ ಧಾರ್ಮಿಕ ವಿಧ್ವಾಂಸ, ಸಮಸ್ತ ಉಪಾಧ್ಯಕ್ಷ, ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷರಾದ ಪಾಣಕ್ಕಾಡ್ ಹೈದರಲಿ ಶಿಹಾಬ್ ತಂಜಳ್ (74) ಅವರು ಎರ್ನಾಕುಳಂನ ಖಾಸಗಿ ಆಸ್ಪತ್ರೆಯಲ್ಲಿ ಇಂದು ವಫಾತ್ ಆಗಿದ್ದಾರೆ.
1972.ರಲ್ಲಿ ಜಾಮಿಯಾ ನೂರಿಯಾದಲ್ಲಿ ಸೇರಿದರು. 1975 ರಲ್ಲಿ ಫೈಝಿ ಪದವಿ ಪಡೆದರು.ಶಂಸುಲ್ ಉಲಮಾ ಇ.ಕೆ.ಅಬೂಬಕರ್ ಮುಸ್ಲಿಯಾರ್, ಕೊಟ್ಟುಮಲ ಅಬೂಬಕರ್ ಮುಸ್ಲಿಯಾರ್, ಎ.ಪಿ.ಮುಹಮ್ಮದ್ ಮುಸ್ಲಿಯಾರ್ ಮುಂತಾದವರು ಗುರುಗಳಾಗಿದ್ದರು.
1973ರಲ್ಲಿ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಸ್ಥಾಪಿಸಿದಾಗ ಸಯ್ಯಿದ್ ಹೈದರ್ ಅಲಿಯವರು ಅದರ ಮೊದಲ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.
ಹಲವಾರು ಮೊಹಲ್ಲಾಗಳ ಖಾಝಿಯಾಗಿದ್ದ ಅವರು ಪಟ್ಟಿಕಾಡ್ ಜಾಮಿಯಾ ನೂರಿಯಾ, ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯ, ಕಡಮೇರಿ ರಹ್ಮಾನಿಯಾ ಅರೇಬಿಕ್ ಕಾಲೇಜು ಮತ್ತು ನಂದಿ ದಾರುಸ್ಸಲಾಮ್ ಅರೇಬಿಕ್ ಕಾಲೇಜು ಸೇರಿದಂತೆ ನೂರಾರು ಧಾರ್ಮಿಕ ಮತ್ತು ಲೌಕಿಕ ಸಂಸ್ಥೆಗಳ ಅಧ್ಯಕ್ಷರಾಗಿದ್ದರು.
2008ರಲ್ಲಿ ಅವರು ಸಮಸ್ತದ ಮುಶಾವರಾ ಸಮಿತಿ ಸದಸ್ಯರಾಗಿ ಆಯ್ಕೆಗೊಂಡರು. ಅಕ್ಟೋಬರ್ 2, 2010 ರಂದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಆಗಸ್ಟ್ 1, 2009 ರಂದು ಸೈಯದ್ ಮುಹಮ್ಮದಲಿ ಶಿಹಾಬ್ ತಂಜಳ್ ಅವರ ಮರಣದ ನಂತರ, ಹೈದರ್ ಅಲಿ ಶಿಹಾಬ್ ತಂಜಳ್ ಅವರು ಮುಸ್ಲಿಂ ಲೀಗ್ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.
ಜೂನ್ 15, 1947 ರಂದು ಪಾಣಕ್ಕಾಡ್ನ ಕೊಡಪ್ಪನಕ್ಕಲ್ನಲ್ಲಿ ಜನಿಸಿದ ಅವರು ದಿವಂಗತ ಮಾಳಿಯೆಕ್ಕಲ್ ಸೈಯದ್ ಅಹ್ಮದ್ ಪೂಕೋಯ ತಂಜಳ್ (ಪಿಎಂಎಸ್ ಪೂಕೋಯ ತಂಜಲ್) ಮತ್ತು ಮರಿಯಮ್ ಚೆರಿಂಞ ಬೀವಿಯವರ ಮೂರನೇ ಪುತ್ರರಾಗಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ