ಎರ್ನಾಕುಳಂ: ಪ್ರಮುಖ ಧಾರ್ಮಿಕ ವಿಧ್ವಾಂಸ, ಸಮಸ್ತ ಉಪಾಧ್ಯಕ್ಷ, ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷರಾದ ಪಾಣಕ್ಕಾಡ್ ಹೈದರಲಿ ಶಿಹಾಬ್ ತಂಜಳ್ (74) ಅವರು ಎರ್ನಾಕುಳಂನ ಖಾಸಗಿ ಆಸ್ಪತ್ರೆಯಲ್ಲಿ ಇಂದು ವಫಾತ್ ಆಗಿದ್ದಾರೆ.
1972.ರಲ್ಲಿ ಜಾಮಿಯಾ ನೂರಿಯಾದಲ್ಲಿ ಸೇರಿದರು. 1975 ರಲ್ಲಿ ಫೈಝಿ ಪದವಿ ಪಡೆದರು.ಶಂಸುಲ್ ಉಲಮಾ ಇ.ಕೆ.ಅಬೂಬಕರ್ ಮುಸ್ಲಿಯಾರ್, ಕೊಟ್ಟುಮಲ ಅಬೂಬಕರ್ ಮುಸ್ಲಿಯಾರ್, ಎ.ಪಿ.ಮುಹಮ್ಮದ್ ಮುಸ್ಲಿಯಾರ್ ಮುಂತಾದವರು ಗುರುಗಳಾಗಿದ್ದರು.
1973ರಲ್ಲಿ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಸ್ಥಾಪಿಸಿದಾಗ ಸಯ್ಯಿದ್ ಹೈದರ್ ಅಲಿಯವರು ಅದರ ಮೊದಲ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.
ಹಲವಾರು ಮೊಹಲ್ಲಾಗಳ ಖಾಝಿಯಾಗಿದ್ದ ಅವರು ಪಟ್ಟಿಕಾಡ್ ಜಾಮಿಯಾ ನೂರಿಯಾ, ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯ, ಕಡಮೇರಿ ರಹ್ಮಾನಿಯಾ ಅರೇಬಿಕ್ ಕಾಲೇಜು ಮತ್ತು ನಂದಿ ದಾರುಸ್ಸಲಾಮ್ ಅರೇಬಿಕ್ ಕಾಲೇಜು ಸೇರಿದಂತೆ ನೂರಾರು ಧಾರ್ಮಿಕ ಮತ್ತು ಲೌಕಿಕ ಸಂಸ್ಥೆಗಳ ಅಧ್ಯಕ್ಷರಾಗಿದ್ದರು.
2008ರಲ್ಲಿ ಅವರು ಸಮಸ್ತದ ಮುಶಾವರಾ ಸಮಿತಿ ಸದಸ್ಯರಾಗಿ ಆಯ್ಕೆಗೊಂಡರು. ಅಕ್ಟೋಬರ್ 2, 2010 ರಂದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಆಗಸ್ಟ್ 1, 2009 ರಂದು ಸೈಯದ್ ಮುಹಮ್ಮದಲಿ ಶಿಹಾಬ್ ತಂಜಳ್ ಅವರ ಮರಣದ ನಂತರ, ಹೈದರ್ ಅಲಿ ಶಿಹಾಬ್ ತಂಜಳ್ ಅವರು ಮುಸ್ಲಿಂ ಲೀಗ್ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.
ಜೂನ್ 15, 1947 ರಂದು ಪಾಣಕ್ಕಾಡ್ನ ಕೊಡಪ್ಪನಕ್ಕಲ್ನಲ್ಲಿ ಜನಿಸಿದ ಅವರು ದಿವಂಗತ ಮಾಳಿಯೆಕ್ಕಲ್ ಸೈಯದ್ ಅಹ್ಮದ್ ಪೂಕೋಯ ತಂಜಳ್ (ಪಿಎಂಎಸ್ ಪೂಕೋಯ ತಂಜಲ್) ಮತ್ತು ಮರಿಯಮ್ ಚೆರಿಂಞ ಬೀವಿಯವರ ಮೂರನೇ ಪುತ್ರರಾಗಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ