ನವದೆಹಲಿ: ಕಠುವಾ ಅತ್ಯಾಚಾರ ಪ್ರಕರಣದ ವಿಶೇಷ ತನಿಖಾ ತಂಡವು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕೆಲವು ವಕೀಲರು ಅಡ್ಡಿಪಡಿಸಿದ್ದು ನ್ಯಾಯದಾನ ಪ್ರಕ್ರಿಯೆಯಲ್ಲಿ ಆದ ಗಂಭೀರ ಲೋಪ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಸಂಬಂಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ‘ಇದು ನ್ಯಾಯದ ನಿರಾಕರಣೆ ಅಲ್ಲದೆ ಮತ್ತೇನಲ್ಲ. ವಕೀಲರೇ ಈ ಕೆಲಸ ಮಾಡಬಾರದು’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ನ ಕೆಲವು ವಕೀಲರ ಮನವಿಯ ಮೇರೆಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠವು ಪ್ರಕರಣ ದಾಖಲಿಸಿಕೊಂಡಿತು.
‘ಆರೋಪಿ ಅಥವಾ ಸಂತ್ರಸ್ತರಲ್ಲಿ ಯಾರನ್ನೇ ಆಗಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ, ಅದಕ್ಕೆ ಅಡ್ಡಿಪಡಿಸದೇ ಇರುವುದು ವಕೀಲರು ಮತ್ತು ವಕೀಲರ ಸಂಘಗಳ ಪ್ರಾಥಮಿಕ ಕರ್ತವ್ಯ’ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಕಠುವಾ ವಕೀಲರು ತನಿಖಾಧಿಕಾರಿಗಳಿಗೆ ಅಡ್ಡಿಪಡಿಸಿದ ಬಗ್ಗೆ ಏಪ್ರಿಲ್ 19ರಂದು ವಿವರಣೆ ನೀಡುವಂತೆ ಭಾರತೀಯ ವಕೀಲರ ಸಂಘ, ಜಮ್ಮು ಮತ್ತು ಕಾಶ್ಮೀರ ವಕೀಲರ ಸಂಘ, ಕಠುವಾ ಜಿಲ್ಲಾ ವಕೀಲರ ಸಂಘಗಳಿಗೆ ಪೀಠ ಸೂಚನೆ ನೀಡಿದೆ.
ಆರೋಪಪಟ್ಟಿ ಸಲ್ಲಿಸುವುದಕ್ಕೆ ಅಡ್ಡಿಪಡಿಸಿದ್ದು ಅನೈತಿಕತೆಯೇ ಸರಿ. ನ್ಯಾಯಾಂಗ ಪ್ರಕ್ರಿಯೆಗೆ ವಕೀಲರೇ ಅಡ್ಡಿಪಡಿಸುವುದನ್ನು ಕ್ಷಮಿಸಲು ಸಾಧ್ಯವೇ ಇಲ್ಲ
–ಸುಪ್ರೀಂ ಕೋರ್ಟ್















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ