ಕೆಸಿಎಫ್ ಒಮಾನ್ ಸಹಮ್ ಸೆಕ್ಟರ್ ರೂಪೀಕರಣ ವು 11-3-2022 ಶುಕ್ರವಾರ ರಷೀದ್ ನಿವಾಸ ದಿಯಾನ್,ಕಾಬೂರ ದಲ್ಲಿ ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷ ಅಶ್ರಫ್ ಕುತ್ತಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಜಬ್ಬಾರ್ ಸಖಾಫಿ ಕನ್ಯಾನ ಇವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ರಾಷ್ಟ್ರೀಯ ಮೀಡಿಯಾ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ ಇವರು ನೂತನ ಸಮಿತಿ ರಚನೆಯನ್ನು ನಡೆಸಿಕೊಟ್ಟರು.
ನೂತನ ಅಧ್ಯಕ್ಷರಾಗಿ ರಷೀದ್ ಕೊಂಡಂಗೇರಿ ಉಪಾಧ್ಯಕ್ಷರಾಗಿ ಜಬ್ಬಾರ್ ಸಖಾಫಿ ಕನ್ಯಾನ ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಮಾಚಾರ್ ಹಾಗೂ ಕೋಶಾಧಿಕಾರಿಯಾಗಿ ಹಕೀಮ್ ಬೆಳ್ಳಾರೆ ಸುಳ್ಯ ರವರು ಆಯ್ಕೆಯಾದರು. ಅಲ್ಲದೇ ಸಾಂತ್ವನ ವಿಭಾಗದ ಕಾರ್ಯದರ್ಶಿ ಯಾಗಿ ಹಕೀಮ್ ಜೋಕಟ್ಟೆ,
ಆಡಳಿತ ವಿಭಾಗದ ಕಾರ್ಯದರ್ಶಿಯಾಗಿ ಜುನೈದ್,
ಶಿಕ್ಷಣ ವಿಭಾಗ ಕಾರ್ಯದರ್ಶಿ ಯಾಗಿ ಉಮ್ಮರ್ ನಯೀಮಿ ಬೊಲ್ಮಾರ್
ಇಹ್ಸಾನ್ ವಿಭಾಗದ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಮಂಡೆಕೋಲು ಸುಳ್ಯ ಹಾಗೂ ಪ್ರಕಾಶನ ವಿಭಾಗದ ಕಾರ್ಯದರ್ಶಿಯಾಗಿ ಸಿರಾಜ್ ಬೊಲ್ಮಾರ್,ಸಂಘಟನಾ ವಿಭಾಗದ ಕಾರ್ಯದರ್ಶಿಯಾಗಿ ಮಜೀದ್ ಕರೋಪಾಡಿ ಹಾಗೂ
ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಫೀಕ್ ಕೊಡಗು ಇವರು ಆಯ್ಕೆಯಾದರು.
ಸೆಕ್ಟರ್ ಪ್ರದಾನ ಕಾರ್ಯದರ್ಶಿ ಮುಬೀನ್ ಜೋಕಟ್ಟೆ ಯವರು ಸಭೆಯನ್ನು ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಶರೀಫ್ ಮಾಚಾರ್ ವಂದಿಸಿದರು.
ಇತ್ತೀಚೆಗೆ ನಿಧನರಾದ ಸಯ್ಯದ್ ಹೈದರಾಲಿ ಶಿಹಾಬ್ ತಂಙಳ್, ಕೆಸಿಎಫ್ ಬುರೈಮಿ ಸೆಕ್ಟರ್ ಸದಸ್ಯರಾದ ಇಮ್ತಿಯಾಝ್ ಇವರ ತಾಯಿ ಹಾಜಿರ ಇನೋಳಿ ಹಾಗೂ ಕೆಸಿಎಫ್ ಶಿನಾಸ್ ಸದಸ್ಯರಾದ ಮುತ್ತಲಿಬ್ ಕೊಟೇಪುರ ಇವರ ತಂದೆ ಅಬ್ದುಲ್ ಖಾದರ್ ಕೊಟೇಪುರ ಇವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ಮಾಡಿ ದುಆ ನೆರವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ