ಬೆಂಗಳೂರು: ರಾಜ್ಯದ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆಯೇ? ಎಂಬ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿದ್ದು, ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಅವರು ಈ ಕುರಿತಾದ ಪ್ರಶ್ನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕೇಳಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮದರಸಗಳಲ್ಲಿ ಕನ್ನಡ ಕಡ್ಡಾಯದ ಅನುಸರಣೆ ಆಗುತ್ತಿರುವ ಕುರಿತಾಗಿ ಪರಿಶೀಲನೆ ನಡೆಸಲಾಗುತ್ತಿದೆಯೇ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿ, ಮದರಸಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನಕ್ಕೆ ಒಳಪಡುವುದಿಲ್ಲ. ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದಿದ್ದಾರೆ.
ರಾಜ್ಯದ ಮದರಸಾಗಳಲ್ಲಿ ಸಹಿಷ್ಣುತೆ, ಸೌಹಾರ್ದತೆ ಕಲಿಸಲಾಗುತ್ತಿದೆ, ಮೂಲಭೂತವಾದವನ್ನಲ್ಲ
ಮುಂದುವರಿದು, ಮದರಸಗಳಲ್ಲಿ ಕನ್ನಡ ಹೇಳಿಕೊಡಲು ಯಾವ ಅರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಿಸಲಾಗಿದೆ? ಈ ಕುರಿತು ಸರ್ಕಾರದ ನಿಲುವೇನು? ಎಂಬ ಪ್ರಶ್ನೆಗೆ, ಮದರಸಗಳು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶಿಕ್ಷಕರನ್ನು ನೇಮಿಸುವ ಪ್ರಮೇಯ ಇರುವುದಿಲ್ಲ ಎಂದು ಉತ್ತರಿಸಲಾಗಿದೆ.
ಸದ್ಯ ರಾಜ್ಯದ ಮದರಸಗಳಲ್ಲಿ ಉರ್ದು, ಅರಬಿ ಹಾಗೂ ಸ್ಥಳೀಯ ಭಾಷೆಗಳಲ್ಲಿ ಶಿಕ್ಷಣ ನೀಡಲಾಗುತ್ತದೆ. ಆದರೆ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸರ್ಕಾರ ಈ ಮೂಲಕ ಸ್ಪಷ್ಟಪಡಿಸಿದೆ. ರವಿ ಕುಮಾರ್ ಅವರು ರಾಜ್ಯದ ಮದರಸಾಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಕೇಳಿದ್ದರು. ಆದರೆ, ಮದರಸಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡುತ್ತಿಲ್ಲ ಹಾಗೂ ಇತರ ದೇವರನ್ನು ಆರಾಧಿಸುವವರನ್ನು ಕೊಲ್ಲಬೇಕು ಎಂದು ಸಣ್ಣ ಮಕ್ಕಳಿಗೆ ಕಲಿಸಲಾಗುತ್ತಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿತ್ತು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ