ಬೆಂಗಳೂರು: ರಾಜ್ಯದ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆಯೇ? ಎಂಬ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿದ್ದು, ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಅವರು ಈ ಕುರಿತಾದ ಪ್ರಶ್ನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕೇಳಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮದರಸಗಳಲ್ಲಿ ಕನ್ನಡ ಕಡ್ಡಾಯದ ಅನುಸರಣೆ ಆಗುತ್ತಿರುವ ಕುರಿತಾಗಿ ಪರಿಶೀಲನೆ ನಡೆಸಲಾಗುತ್ತಿದೆಯೇ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿ, ಮದರಸಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನಕ್ಕೆ ಒಳಪಡುವುದಿಲ್ಲ. ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದಿದ್ದಾರೆ.
ರಾಜ್ಯದ ಮದರಸಾಗಳಲ್ಲಿ ಸಹಿಷ್ಣುತೆ, ಸೌಹಾರ್ದತೆ ಕಲಿಸಲಾಗುತ್ತಿದೆ, ಮೂಲಭೂತವಾದವನ್ನಲ್ಲ
ಮುಂದುವರಿದು, ಮದರಸಗಳಲ್ಲಿ ಕನ್ನಡ ಹೇಳಿಕೊಡಲು ಯಾವ ಅರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಿಸಲಾಗಿದೆ? ಈ ಕುರಿತು ಸರ್ಕಾರದ ನಿಲುವೇನು? ಎಂಬ ಪ್ರಶ್ನೆಗೆ, ಮದರಸಗಳು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶಿಕ್ಷಕರನ್ನು ನೇಮಿಸುವ ಪ್ರಮೇಯ ಇರುವುದಿಲ್ಲ ಎಂದು ಉತ್ತರಿಸಲಾಗಿದೆ.
ಸದ್ಯ ರಾಜ್ಯದ ಮದರಸಗಳಲ್ಲಿ ಉರ್ದು, ಅರಬಿ ಹಾಗೂ ಸ್ಥಳೀಯ ಭಾಷೆಗಳಲ್ಲಿ ಶಿಕ್ಷಣ ನೀಡಲಾಗುತ್ತದೆ. ಆದರೆ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸರ್ಕಾರ ಈ ಮೂಲಕ ಸ್ಪಷ್ಟಪಡಿಸಿದೆ. ರವಿ ಕುಮಾರ್ ಅವರು ರಾಜ್ಯದ ಮದರಸಾಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಕೇಳಿದ್ದರು. ಆದರೆ, ಮದರಸಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡುತ್ತಿಲ್ಲ ಹಾಗೂ ಇತರ ದೇವರನ್ನು ಆರಾಧಿಸುವವರನ್ನು ಕೊಲ್ಲಬೇಕು ಎಂದು ಸಣ್ಣ ಮಕ್ಕಳಿಗೆ ಕಲಿಸಲಾಗುತ್ತಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿತ್ತು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ