ಮಂಗಳೂರು: ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲವೆಂದು ಹೈಕೋರ್ಟ್ ನೀಡಿರುವ ತೀರ್ಪು ಇಸ್ಲಾಮೀ ಪ್ರಮಾಣಗಳನ್ನು ಅವಲಂಬಿತಗೊಂಡಿಲ್ಲವೆಂದು ಸುನ್ನೀ ಜಮ್ಇಯ್ಯತುಲ್ ಉಲಮಾ ಅಭಿಪ್ರಾಯಪಟ್ಟಿದೆ.
ಮಹಿಳೆಯರಿಗೆ ಹಿಜಾಬ್ ಕಡ್ಡಾಯ ಎನ್ನುವುದು ಖುರ್ಆನ್ ಮತ್ತು ಪ್ರವಾದಿ ವಚನಗಳ ಆದೇಶಗಳಲ್ಲಿ ಸಂಶಯಾತೀತವಾಗಿ ದಾಖಲೆ ಗೊಂಡಿದ್ದು ಜಾಗತಿಕ ಮಟ್ಟದಲ್ಲಿ ಹಿಜಾಬನ್ನು ಮುಸ್ಲಿಮ್ ಮಹಿಳೆಯರ ಸಂಕೇತವಾಗಿ ಕಾಣಲಾಗುತ್ತಿದೆ.ಇಂತಹ ಸ್ಪಷ್ಟ ವಿಷಯಗಳ ಬಗ್ಗೆ ನ್ಯಾಯಾಲಯವು ಮೇಲಿನ ತೀರ್ಪನ್ನು ನೀಡಿರುವುದು ಅಚ್ಚರಿಯನ್ನು ಹುಟ್ಟಿಸಿದೆ.
ತೀರ್ಪಿನ ಬಗ್ಗೆ ವಿದ್ವಾಂಸ ಒಕ್ಕೂಟವು ಅಧ್ಯಯನ ನಡೆಸಿ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸುನ್ನೀ ಜಮ್ಇಯ್ಯತುಲ್ ಉಲಮಾ ಕರ್ನಾಟಕ ಅಧ್ಯಕ್ಷ ಝೈನುಲ್ ಉಲಮಾ ಖಾಝಿ ಎಮ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದರು.
ಹೈಕೋರ್ಟ್ ತೀರ್ಪು ನಿರಾಶೆ ತಂದಿದೆ- ಎಸ್ ವೈ ಎಸ್
ಹಿಜಾಬ್ ಕುರಿತು ಕೋರ್ಟ್ ಹೇಳಿಕೆ ಖುರ್ಆನಿನ ಆದೇಶಕ್ಕೆ ವಿರುದ್ಧ, ಹಿಜಾಬ್ ಮುಸ್ಲಿಂ ಮಹಿಳೆಯರಿಗೆ ಇಸ್ಲಾಂ ಕಡ್ಡಾಯಗೊಳಿಸಿದೆ.
ಕಾನೂನು ಹೋರಾಟ ಮುಂದುವರಿಯಲಿದ್ದು ಮುಂದಿನ ತೀರ್ಪುಗಳಲ್ಲಿ ನ್ಯಾಯ ದೊರಕುವ ಭರವಸೆಯಿದೆ ಎಂದು ಕರ್ನಾಟಕ ರಾಜ್ಯ ಎಸ್ ವೈ ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.







