ಮಂಗಳೂರು: ಕರ್ನಾಟಕ ಅಮೀರ್ ಎ ಶರೀಯತ್ ಮುಖ್ಯಸ್ಥರಾದ ಮೌಲಾನ ಸಗೀರ್ ಅಹಮ್ಮದ್ ರವರು ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ವಿಷಾದ ವ್ಯಕ್ತಪಡಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸಿದೆ.
ಇತ್ತೀಚೆಗಿನ ಕರ್ನಾಟಕ ಉಚ್ಛ ನ್ಯಾಯಾಲಯದ ಹಿಜಾಬ್ ಕುರಿತ ತೀರ್ಪುವಿನಲ್ಲಿ ಇಸ್ಲಾಮಿನಲ್ಲಿ ಮುಸ್ಲಿಮ್ ಮಹಿಳೆಯರಿಗೆ ಹಿಜಾಬ್ ಮಹತ್ವವಲ್ಲ ,ಮತ್ತು ಹಿಜಾಬ್ ಇಸ್ಲಾಮಿನಲ್ಲಿ ಅವಿಭಾಜ್ಯ ಅಂಗ ವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ವಿಮರ್ಶಿಸಿ ಕರ್ನಾಟಕಾದ್ಯಂತ ಮಾರ್ಚ್ 17 ರಂದು ಸ್ವಯಂ ಪ್ರೇರಿತ ವ್ಯವಹಾರ ಸ್ಥಗಿತಕ್ಕೆ ಕರೆ ನೀಡಲಾಗಿದೆ. ಈ ಕರೆಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸಿದೆ.
ತೀರ್ಪು ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಹಕ್ಕುಗಳನ್ನು ಕಸಿದು ಕೊಳ್ಳುವ ಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಶಾಂತಿಯುತ ವ್ಯವಹಾರ ಸ್ಥಗಿತ ಮಾಡಬೇಕಾಗಿ ವಿನಂತಿ ಮತ್ತು ಈ ಸ್ಥಗಿತ ಶಾಂತಿಯುತ ವಾಗಿರುತ್ತದೆ. ಕಾನೂನು ,ಶಾಂತಿ ಸುವ್ಯವಸ್ಥೆ ಪಾಲನೆಗೆ ಪೂರಕ ವಾಗಿರಲಿ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ