ಹೇಗ್, ಮಾರ್ಚ್ 17: ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯವಾದ ಅಂತಾರಾಷ್ಟ್ರೀಯ ನ್ಯಾಯಾಲಯವು ಉಕ್ರೇನ್ ದಾಳಿಯನ್ನು ತಕ್ಷಣವೇ ನಿಲ್ಲಿಸುವಂತೆ ರಷ್ಯಾಕ್ಕೆ ಆದೇಶಿಸಿದೆ. ರಷ್ಯಾದ ದಾಳಿಯ ನಂತರ ಉಕ್ರೇನ್ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯದ ಮೊರೆ ಹೋಗಿತ್ತು. ವಾದ-ವಿವಾದ ಆಲಿಸಿದ ಬಳಿಕ ರಷ್ಯಾದ ಪರ ಮತ್ತು ವಿರುದ್ಧವಾಗಿ ಮತ ಚಲಾಯಿಸಲು ಐಸಿಜೆ ನಿರ್ಧರಿಸಿತು. ಆದರೆ ಅತ್ಯಂತ ಅಚ್ಚರಿಯ ವಿಷಯವೆಂದರೆ ಐಸಿಜೆಯಲ್ಲಿ ಭಾರತದ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಕೂಡ ರಷ್ಯಾದ ವಿರುದ್ಧ ಮತ ಚಲಾಯಿಸಿದ್ದಾರೆ. ಇದೇ ವೇಳೆ ಐಸಿಜೆ ಆದೇಶವನ್ನು ಅಮೆರಿಕ ಕೂಡ ಸ್ವಾಗತಿಸಿದೆ.
13 ನ್ಯಾಯಾಧೀಶರು ರಷ್ಯಾದ ವಿರುದ್ಧ ಮತ
13 ನ್ಯಾಯಾಧೀಶರು ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸಿದರೆ, ಕೇವಲ ಇಬ್ಬರು ಮಾತ್ರ ಪರವಾಗಿ ಮತ ಹಾಕಿದರು. ಈ 13 ನ್ಯಾಯಾಧೀಶರಲ್ಲಿ ಭಾರತೀಯ ನ್ಯಾಯಮೂರ್ತಿ ಜಸ್ಟಿಸ್ ದಲ್ವೀರ್ ಭಂಡಾರಿ ಕೂಡ ಸೇರಿದ್ದಾರೆ. ಇಬ್ಬರು ನ್ಯಾಯಾಧೀಶರಾದ ಉಪಾಧ್ಯಕ್ಷ ಕಿರಿಲ್ ಗೆವೊರ್ಜಿಯನ್ (ರಷ್ಯಾ) ಮತ್ತು ನ್ಯಾಯಾಧೀಶ ಸ್ಯೂ ಹ್ಯಾಂಕಿನ್ (ಚೀನಾ) ರಷ್ಯಾದ ಪರವಾಗಿ ಮತ ಚಲಾಯಿಸಿದರು.
ಭಾರತದ ನ್ಯಾಯಾಧೀಶ ದಲ್ವೀರ್ ಭಂಡಾರಿ ಯಾರು?
ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ತಮ್ಮ ಎರಡನೇ ಅವಧಿಯನ್ನು ಪೂರ್ಣಗೊಳಿಸುತ್ತಿದ್ದಾರೆ. ಅವರು 2012ರಲ್ಲಿ ಮೊದಲ ಅವಧಿಗೆ ಆಯ್ಕೆಯಾದರು, ಬಳಿಕ ಅದು 2018 ರವರೆಗೆ ಮುಂದುವರೆಯಿತು. ದಲ್ವೀರ್ ಅವರು ಭಾರತದಿಂದ ಮರು-ನಾಮನಿರ್ದೇಶನಗೊಂಡು, ಯುಕೆ ನಾಮನಿರ್ದೇಶಿತ ನ್ಯಾಯಮೂರ್ತಿ ಗ್ರೀನ್ವುಡ್ ಅವರನ್ನು ಸೋಲಿಸುವ ಮೂಲಕ ICJ ನಲ್ಲಿ ಮತ್ತೊಂದು ಅವಧಿಯನ್ನು ಗೆದ್ದುಕೊಂಡಿದ್ದಾರೆ.
ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದ ನಂತರ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾವನ್ನು ತಕ್ಷಣವೇ ಐಸಿಜೆ ಆದೇಶವನ್ನು ಪಾಸಿಸುವಂತೆ ಕೇಳಿಕೊಂಡರು. ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧದ ಪ್ರಕರಣದಲ್ಲಿ ಉಕ್ರೇನ್ ಸಂಪೂರ್ಣ ಜಯ ಸಾಧಿಸಿದಂತಾಗಿದೆ. ಆದೇಶವನ್ನು ನಿರ್ಲಕ್ಷಿಸುವುದು ರಷ್ಯಾವನ್ನು ಮತ್ತಷ್ಟು ಪ್ರತ್ಯೇಕಿಸುತ್ತದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ. ರಷ್ಯಾ ಆಕ್ರಮಣವನ್ನು ತಕ್ಷಣವೇ ನಿಲ್ಲಿಸಲು ICJ ಆದೇಶಿಸಿದೆ, ಇದನ್ನು ರಷ್ಯಾ ಅನುಸರಿಸಬೇಕು. ಈ ಆದೇಶವು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಬದ್ಧವಾಗಿದೆ ಎಂದು ಐಸಿಜೆ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ