ಮನಾಮ: ಹವಳದ ದ್ವೀಪದಲ್ಲಿ ಕಾರ್ಯಾಚರಿಸುತ್ತಿರುವ ಬಹರೈನ್ ಕೆ.ಸಿ.ಎಫ್ ವೈವಿಧ್ಯಮಯ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ತನ್ನ ಜೈತ್ರಯಾತ್ರೆಯನ್ನು ಮುಂದುವರಿಸುತ್ತಿದೆ.
ಸಂಘಟನಾ ಕಾರ್ಯಚಟುಟಿಕೆಗಳನ್ನು ಇನ್ನಷ್ಟು ಸಕ್ರೀಯಗೊಳಿಸುವ ನಿಟ್ಟಿನಲ್ಲಿ ಗುದೈಬಿಯ ಬಲೂಚಿ ಮಸೀದಿಯ ಸನಿಹದಲ್ಲಿರುವ ಸುಸಜ್ಜಿತವಾದ ಕೆ.ಸಿ.ಎಫ್ ಬಹರೈನ್ ನೂತನ ಕೇಂದ್ರ ಕಚೇರಿಯನ್ನು ದಿನಾಂಕ 17.03.2022 ಗುರುವಾರ ರಾತ್ರಿ 8:30 ಕ್ಕೆ ಸರಿಯಾಗಿ ಅಲ್ ಖಾದಿಸ ಚೇರ್ಮ್ಯಾನ್ ಬಹುಮಾನ್ಯರಾದ ಕಾವಲ್ ಕಟ್ಟೆ ಹಝ್ರತ್ ರವರು ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ರವರು ವಹಿಸಿದ್ದರು.ಕಾರ್ಯಕ್ರಮದ ಭಾಗವಾಗಿ ಜಲಾಲಿಯ ರಾತೀಬ್ ಮತ್ತು ಕೆಸಿಎಫ್ ಬಹರೈನ್ ವತಿಯಿಂದ ವಾರಕ್ಕೊಮ್ಮೆ ನಡೆಯುವ ಸ್ವಲಾತ್ ಮಜ್ಲಿಸ್ ಹಾಗೂ ಬರಾಹತ್ ದಿನದ ಪ್ರಯುಕ್ತ ದುಃಆ ಸಂಗಮವು ನಡೆಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಐಎನ್ಸಿ ಸಾಂತ್ವನ ಅಧ್ಯಕ್ಷರಾದ ಅಲಿ ಮುಸ್ಲಿಯಾರ್, ಕೆಎಂಸಿಸಿ ಬಹರೈನ್ ಉಪಾಧ್ಯಕ್ಷರಾದ ಶಾಫಿ ಪಾರಕಟ್ಟ, ಕಲಂದರ್ ರಝ್ವಿ ಕಾವಲ್ಕಟ್ಟೆ, ರಾಷ್ಟ್ರೀಯ ಸಮಿತಿಯ,ಝೋನ್ ಸೆಕ್ಟರ್ ಗಳ ನಾಯಕರುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತಾರರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ರವರು ಬಂದ ಅತಿಥಿಗಳನ್ನ ಸ್ವಾಗತಿಸಿ, ಪ್ರಕಾಶನ ಅಧ್ಯಕ್ಷರಾದ ಲತೀಫ್ ಪೇರೋಲಿ ಧನ್ಯವಾದಗೈದರು.

















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು