ಮನಾಮ: ಹವಳದ ದ್ವೀಪದಲ್ಲಿ ಕಾರ್ಯಾಚರಿಸುತ್ತಿರುವ ಬಹರೈನ್ ಕೆ.ಸಿ.ಎಫ್ ವೈವಿಧ್ಯಮಯ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ತನ್ನ ಜೈತ್ರಯಾತ್ರೆಯನ್ನು ಮುಂದುವರಿಸುತ್ತಿದೆ.
ಸಂಘಟನಾ ಕಾರ್ಯಚಟುಟಿಕೆಗಳನ್ನು ಇನ್ನಷ್ಟು ಸಕ್ರೀಯಗೊಳಿಸುವ ನಿಟ್ಟಿನಲ್ಲಿ ಗುದೈಬಿಯ ಬಲೂಚಿ ಮಸೀದಿಯ ಸನಿಹದಲ್ಲಿರುವ ಸುಸಜ್ಜಿತವಾದ ಕೆ.ಸಿ.ಎಫ್ ಬಹರೈನ್ ನೂತನ ಕೇಂದ್ರ ಕಚೇರಿಯನ್ನು ದಿನಾಂಕ 17.03.2022 ಗುರುವಾರ ರಾತ್ರಿ 8:30 ಕ್ಕೆ ಸರಿಯಾಗಿ ಅಲ್ ಖಾದಿಸ ಚೇರ್ಮ್ಯಾನ್ ಬಹುಮಾನ್ಯರಾದ ಕಾವಲ್ ಕಟ್ಟೆ ಹಝ್ರತ್ ರವರು ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ರವರು ವಹಿಸಿದ್ದರು.ಕಾರ್ಯಕ್ರಮದ ಭಾಗವಾಗಿ ಜಲಾಲಿಯ ರಾತೀಬ್ ಮತ್ತು ಕೆಸಿಎಫ್ ಬಹರೈನ್ ವತಿಯಿಂದ ವಾರಕ್ಕೊಮ್ಮೆ ನಡೆಯುವ ಸ್ವಲಾತ್ ಮಜ್ಲಿಸ್ ಹಾಗೂ ಬರಾಹತ್ ದಿನದ ಪ್ರಯುಕ್ತ ದುಃಆ ಸಂಗಮವು ನಡೆಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಐಎನ್ಸಿ ಸಾಂತ್ವನ ಅಧ್ಯಕ್ಷರಾದ ಅಲಿ ಮುಸ್ಲಿಯಾರ್, ಕೆಎಂಸಿಸಿ ಬಹರೈನ್ ಉಪಾಧ್ಯಕ್ಷರಾದ ಶಾಫಿ ಪಾರಕಟ್ಟ, ಕಲಂದರ್ ರಝ್ವಿ ಕಾವಲ್ಕಟ್ಟೆ, ರಾಷ್ಟ್ರೀಯ ಸಮಿತಿಯ,ಝೋನ್ ಸೆಕ್ಟರ್ ಗಳ ನಾಯಕರುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತಾರರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ರವರು ಬಂದ ಅತಿಥಿಗಳನ್ನ ಸ್ವಾಗತಿಸಿ, ಪ್ರಕಾಶನ ಅಧ್ಯಕ್ಷರಾದ ಲತೀಫ್ ಪೇರೋಲಿ ಧನ್ಯವಾದಗೈದರು.

















ಇನ್ನಷ್ಟು ಸುದ್ದಿಗಳು
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ