ತಲಪಾಡಿ ( ಮಾ 21 ) : ತಲಪಾಡಿ ಗ್ರಾಮದ 1,2,3,4 ನೇ ವಾರ್ಡಿಗೆ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ನಾಗರೀಕ ಸಮಿತಿಯ ನೇತೃತ್ವದಲ್ಲಿ ಸಾರ್ವಜನಿಕರು ಇಂದು ತಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮಣ್ಣು ಮುತ್ತಿಗೆಯ ನೇತೃತ್ವ ವಹಿಸಿದ್ದರು. ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿದ್ದೀಕ್ ತಲಪಾಡಿ ಮತ್ತು ಎಸ್.ಡಿ.ಪಿ.ಐ ನ ಹಕೀಮ್ ಕೆಸಿ ನಗರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಒಂದು ವಾರದ ಹಿಂದೆ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ಗಡುವು ನಿಗದಿಪಡಿಸಿ ಮನವಿ ಸಲ್ಲಿಸಿ ನೀರು ಸರಬರಾಜು ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಇಂದು ಮುತ್ತಿಗೆ ಹಾಕಲಾಯಿತು.
ಪ್ರತಿಭಟನಾಕಾರರ ಜೊತೆ ಮಾತನಾಡಿದ ಪಂಚಾಯತ್ ಅಧಿಕಾರಿಗಳು ಇಂದಿನಿಂದಲೇ ನೀರು ಸರಬರಾಜು ಆರಂಭಿಸುವ ಬಗ್ಗೆ ಸ್ಪಷ್ಟನೆ ಕೊಟ್ಟ ಹಿನ್ನೆಲೆಯಲ್ಲಿ ಮುತ್ತಿಗೆ ಕೈ ಬಿಡಲಾಯಿತು.
ಮುತ್ತಿಗೆ ಕಾರ್ಯಕ್ರಮದಲ್ಲಿ SDPI ಗ್ರಾಮ ಸಮಿತಿಯ ಕಾರ್ಯದರ್ಶಿ ರಶೀದ್ ಇಂಜಿನಿಯರ್, ಮುಖಂಡರಾದ ಮೊಯ್ದಿನ್ ಉಚ್ಚಿಲ್, ಹಾರೂನ್, ಅಂದು, ಬಶೀರ್ , ಅಬ್ದುಲ್ಲಾ, ಸಿನಾನ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ