ಬೆಂಗಳೂರು: ಹಿಜಾಬ್ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ.
ಪಬ್ಲಿಕ್ ಟಿವಿ ಫೆಬ್ರವರಿ 3ರಂದು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ, ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯ ಕಾರ್ಯಕ್ರಮದಲ್ಲಿ ಎಚ್.ಆರ್. ರಂಗನಾಥ್ ಹಾಗೂ ಅರುಣ್ ಬಡಿಗರ್ ಅವರು ಮತನಾಡುತ್ತಾ, ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದು ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.
ಈ ಹೇಳಿಕೆಯನ್ನು ವಿರೋಧಿಸಿ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ನಿರೂಪಕರಿಬ್ಬರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಅವರ ದೂರನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ), 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.
















ಇನ್ನಷ್ಟು ಸುದ್ದಿಗಳು
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ