ನವದೆಹಲಿ: ಬಿಜೆಪಿ ನಾಯಕರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪರ ಪ್ರಚಾರ ಮುಂದುವರಿಸಿದ್ದರೆ, ವಿರೋಧ ಪಕ್ಷಗಳ ಕೆಲವು ಮುಖಂಡರು ಕಿಡಿ ಕಾರುತ್ತಿದ್ದಾರೆ. ಆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ‘ಅರ್ಬನ್ ನಕ್ಸಲ್’ ಎಂದು ಟೀಕಿಸಿದ್ದಾರೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘… ಸುಳ್ಳಿನ ಸಿನಿಮಾಗಳ ಪೋಸ್ಟರ್ ಸಹ ಹಾಕುವುದಿಲ್ಲ…’ ಎಂದು ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದರು.
‘ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಆ ಚಿತ್ರದ ನಿರ್ಮಾಣ ಮಾಡಿರುವವರು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಬಹುದು. ಇದರಿಂದ ಸಿನಿಮಾವನ್ನು ಉಚಿತವಾಗೇ ನೋಡಲು ಸಾಧ್ಯವಾಗುತ್ತದೆ. ಎಲ್ಲರೂ ಚಿತ್ರವನ್ನು ವೀಕ್ಷಿಸಬಹುದು’ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ ಮಾತಿಗೆ ಇಡೀ ಸದನ ನಗೆಗಡಲಲ್ಲಿ ತೇಲಿತ್ತು.
ಕೇಜ್ರಿವಾಲ್ ಅವರು 2016 ‘ನಿಲ್ ಬಟ್ಟೆ ಸನ್ನಾಟಾ’ ಮತ್ತು 2019ರಲ್ಲಿ ‘ಸಾಂಡ್ ಕಿ ಆಂಖ್’ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ನೀಡಿದ್ದರ ಬಗ್ಗೆ ಪ್ರಕಟಿಸಿದ್ದ ಹಳೆಯ ಟ್ವೀಟ್ಗಳ ಸ್ಕ್ರೀನ್ಶಾಟ್ಗಳನ್ನು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ‘ಕೇಜ್ರಿವಾಲ್ ಎಕ್ಸ್ಪೋಸ್ಡ್’ ಎಂಬ ಟ್ಯಾಗ್ ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಮಾತನಾಡುತ್ತ ಕೇಜ್ರಿವಾಲ್ ನಗುತ್ತಿರುವ ವಿಡಿಯೊ ಅನ್ನು ಹಂಚಿಕೊಂಡಿರುವ ಅಮಿತ್ ಮಾಳವಿಯಾ, ‘ಕೇಜ್ರಿವಾಲ್ ಅವರು ಹಿಂದೆ ಆ ಸಿನಿಮಾಗಳನ್ನು ಯುಟ್ಯೂಬ್ನಲ್ಲಿ ಹಾಕುವಂತೆ ಏಕೆ ಸಲಹೆ ನೀಡಲಿಲ್ಲ? ದೆಹಲಿಯಲ್ಲಿ ಏಕೆ ತೆರಿಗೆ ವಿನಾಯಿತಿ ನೀಡಲಾಯಿತು?….ಕಾಶ್ಮೀರ್ ಫೈಲ್ಸ್ ಹಿಂದೂಗಳ ಹತ್ಯೆಗಳ ಕುರಿತಾದುದು, ಹಾಗಾಗಿಯೇ ಈ ಅರ್ಬನ್ ನಕ್ಸಲ್ಗೆ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ’ ಎಂದು ಮೂದಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಸಚಿವರು, ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಮುಖಂಡರು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಆ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
‘ಬಿಜೆಪಿಯವರು ಸಿನಿಮಾದ ಪೋಸ್ಟರ್ಅನ್ನು ಅಂಟಿಸುತ್ತಿದ್ದಾರೆ. ಹಿಟ್ಲರ್ ಕೂಡ ತನ್ನ ಗುಲಾಮರಿಗೆ ಉದ್ಯೋಗವನ್ನು ನೀಡಿದ್ದ. ನಿಮಗೆ ಅವರೇನು (ಮೋದಿ) ಕೊಟ್ಟಿದ್ದಾರೆ? ಏನೇ ಆದರೂ ಕೇಜ್ರಿವಾಲ್ ನಿಮಗಾಗಿ ಕೆಲಸ ಮಾಡಲು ಸಿದ್ಧ… ‘ ಎಂದು ಕೇಜ್ರಿವಾಲ್ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್