ಉಳ್ಳಾಲ ( ಮಾ 25 ) : ಕುತ್ತಾರಿನಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿದ್ದ ನಮ್ಮ ನಡೆ ಕೊರಗಜ್ಜ ಕ್ಷೇತ್ರದ ಕಡೆ ಎಂಬ ಕಾರ್ಯಕ್ರಮದಲ್ಲಿ ತ್ರಿವರ್ಣ ಬದಲಾಯಿಸಿ ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಮತ್ತು ಜನಗಣಮನವನ್ನು ಬದಲಾಯಿಸಿ ವಂದೇ ಮಾತರಂ ಅನ್ನು ರಾಷ್ಟ್ರ ಗೀತೆಯನ್ನಾಗಿ ಮಾಡುತ್ತೇವೆ ಎಂದು ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಹಿಯಾಳಿಸಿ ರಾಷ್ಟ್ರದ್ರೋಹವೆಸಗಿರುವ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುಧ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಮುನ್ನೂರು ಗ್ರಾಮ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುತ್ತಾ, ದೇಶ ವಿರೋಧಿ ಹೇಳಿಕೆ ನೀಡುತ್ತಾ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಪ್ರಭಾಕರ ಭಟ್ ಮೇಲೆ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿರುವ ಎಸ್.ಡಿ.ಪಿ.ಐ ದೂರಿನ ಜೊತೆ ಪ್ರಭಾಕರ ಭಟ್ ಮಾಡಿದ ರಾಷ್ಟ್ರದ್ರೋಹಿ ಭಾಷಣದ ವಿಡಿಯೋ ಸಿಡಿಯನ್ನೂ ಸಲ್ಲಿಸಿದೆ.
ದೂರು ನೀಡಿದ ನಿಯೋಗದಲ್ಲಿ ಎಸ್.ಡಿ.ಪಿ.ಐ ಉಳ್ಳಾಲ ಕ್ಷೇತ್ರ ಸಮಿತಿ ಸದಸ್ಯ ಸುಹೈಲ್ ಉಳ್ಳಾಲ್, ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷರಾದ ಝುಬೈರ್, ಕಾರ್ಯದರ್ಶಿ ಮುನೀರ್, ಸದಸ್ಯರಾದ ರಹಿಮಾನ್,ಫಾರೂಕ್, ಜಬ್ಬಾರ್ ಸಂತೋಷ್ ನಗರ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?