ತಲಪಾಡಿ ( ಮಾ 26 ) : ಗ್ರಾಮಗಳ ಅಭಿವೃದ್ಧಿಗೆ ಪಕ್ಷ ಭೇಧ ಮರೆತು ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಒಂದಾಗಿ ಕೆಲಸ ಮಾಡಿದರೆ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ. ಸರ್ಕಾರದಿಂದ ಬರುವ ಅನುದಾನ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸದೇ ಗ್ರಾಮದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಮುಂದಾಗಬೇಕೆಂದು ಎಸ್.ಡಿ.ಪಿ.ಐ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಕರೆ ನೀಡಿದರು.
ಅವರು ತಲಪಾಡಿ ಗ್ರಾಮದ ಕೆಸಿ ರೋಡ್ ನಲ್ಲಿ ಎಸ್.ಡಿ.ಪಿ.ಐ ನ ಹತ್ತು ಮಂದಿ ಗ್ರಾಮ ಪಂಚಾಯತ್ ಸದಸ್ಯರು ತಮ್ಮ ವಾರ್ಡ್ ನಲ್ಲಿ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ತಲಪಾಡಿ ಗ್ರಾಮದಲ್ಲಿ ಎಸ್.ಡಿ.ಪಿ.ಐ ವಿರೋಧ ಪಕ್ಷವಾಗಿದ್ದು ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಧ್ವನಿ ಎತ್ತುತ್ತಾ ಬಂದಿದೆ. ಕೋವಿಡ್ ಹೆಸರಿನಲ್ಲಿ ಗ್ರಾಮ ಪಂಚಾಯತ್ ಗೆ ಸಿಗಬೇಕಾದ ಅನುದಾನವನ್ನು ಕಡಿತಗೊಳಿಸಿರುವ ಈ ಸಂದರ್ಭದಲ್ಲಿ ಇಲ್ಲಿ ಗೆದ್ದ ನಮ್ಮ ಪಕ್ಷದ ಬೆಂಬಲಿತ 10 ಮಂದಿ ಅಭ್ಯರ್ಥಿಗಳು ಒಂದು ವರ್ಷದಲ್ಲಿ 28,34,100 ರೂಪಾಯಿಗಳ ಅನುದಾನವನ್ನು ತಂದು ವಾರ್ಡ್ ಗಳ ಅಭಿವೃದ್ಧಿಗೆ ಶ್ರಮಿಸಿರುವುದು ಸಾಮಾಜಿಕ ಸೇವೆಯಲ್ಲಿ ಅವರಿಗಿರುವ ಬದ್ಧತೆಗೆ ಸಾಕ್ಷಿ ಎಂದರು.
ಸಭೆಯನ್ನುದ್ದೇಶಿಸಿ ಎಸ್.ಡಿ.ಪಿ.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ, ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್ ಮಾತನಾಡಿದರು. ಸಭಾಧ್ಯಕ್ಷತೆಯನ್ನು ಗ್ರಾಮ ಸಮಿತಿಯ ಅಧ್ಯಕ್ಷರಾದ ಇಮ್ರಾನ್ ಪೂಮಣ್ಣು ವಹಿಸಿದ್ದರು.
ವೇದಿಕೆಯಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ, ಜಿಲ್ಲಾ ಸಮಿತಿ ಸದಸ್ಯ ಝಾಕಿರ್ ಉಳ್ಳಾಲ್, ಬ್ಲಾಕ್ ಸಮಿತಿ ಅಧ್ಯಕ್ಷ ಸಲಾಂ ವಿದ್ಯಾನಗರ, ಅಬ್ಬಾಸ್ ಕಿನ್ಯಾ ಉಪಸ್ಥಿತರಿದ್ದರು. ರಶೀದ್ ಇಂಜಿನಿಯರ್ ಸ್ವಾಗತಿಸಿದರೆ ಇಸ್ಮಾಯಿಲ್ ಟಿ ಧನ್ಯವಾದ ಸಲ್ಲಿಸಿದರು. ಮೊಯ್ದಿನ್ ಅಜ್ಜಿನಡ್ಕ ಕಾರ್ಯಕ್ರಮ ನಿರೂಪಿಸಿದರು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್