ಮೂಡುಬಿದಿರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದಲ್ಲಿ ಮಹತ್ತರವಾದ ಒಂದು ಹಂತವಾಗಿದ್ದು ಯಾರೂ ಪರೀಕ್ಷೆಗಳನ್ನು ಕಳೆದುಕೊಳ್ಳಬಾರದು. ಗರಿಷ್ಠ ಅನುಕೂಲತೆಗಳನ್ನು ಬಳಸಿ ಪರೀಕ್ಷೆಗೆ ಹಾಜರಾಗಬೇಕು. ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣ ಇತ್ಯರ್ಥಗೊಂಡು ಶೀಘ್ರವಾಗಿ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ರಾಜ್ಯದ ವಿವಿಧ ಕಡೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಧ್ಯೆ ಮೂಡುಬಿದಿರೆ ಝಿಕ್ರಾ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಕಾಂತಪುರಂ ಉಸ್ತಾದರು ಸಲಹೆ ನೀಡಿದರು.
ಮುಸ್ಲಿಂ ಹೆಣ್ಮಕ್ಕಳಿಗೆ ಶಾಲ-ಕಾಲೇಜು ತರಗತಿ ಕೊಠಡಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಕರ್ನಾಟಕ ಹೈ ಕೋರ್ಟ್ ನಿಂದ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸಮುದಾಯದೊಳಗೆ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುವ ಹಂತಕ್ಕೆ ಬಂದು ನಿಂತಿದೆ.
ಈ ನಿಟ್ಟಿನಲ್ಲಿ ನಾವು ಸರಕಾರ ಮತ್ತು ನ್ಯಾಯಾಲಯದೊಂದಿಗೆ ಸಂಘರ್ಷಕ್ಕೆ ನಿಲ್ಲುವುದಿಲ್ಲ. ಸರಕಾರ ಮತ್ತು ನ್ಯಾಯಾಲಯದ ಕಡೆಯಿಂದ ಗೊಂದಲಕ್ಕೆ ತೆರೆ ಎಳೆದು ತಕ್ಷಣ ಸಂಧಾನದ ಮೂಲಕ ಸರ್ವರಿಗೂ ಸಮ್ಮತ ವಾಗುವ ರೀತಿಯ ಕ್ರಮವನ್ನು ನಿರೀಕ್ಷೆ ಮಾಡುವುದಾಗಿ ಅವರು ಹೇಳಿದರು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನ ಮೊರೆ ಹೋಗಲು ನಾವು ನಿರ್ಧರಿಸಿದ್ದೇವೆ. ಮರ್ಕಝ್ ಲಾ ಕಾಲೇಜಿನ ತಜ್ಞ ವಕೀಲರ ತಂಡ ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ. ಹಿಜಾಬ್ ವಿಚಾರವನ್ನು ಕಾನೂನಿನ ಮೂಲಕ ಎದುರಿಸಲು ಅವಕಾಶ ಮುಕ್ತವಾಗಿದೆ. ಆ ಬಗ್ಗೆ ಸಂವಿಧಾನ ನೀಡಿದ ಅವಕಾಶವನ್ನು ಬಳಸಿ ನಾವು ಮುಂದಡಿ ಇಡುತ್ತೇವೆ ಎಂದು ಅವರು ಸ್ಪಷ್ಟ ಪಡಿಸಿದರು.
ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿ ಪಡಿಸುವ ಬಲಿಷ್ಠ ಸಂವಿಧಾನ ಹೊಂದಿರುವ ಭಾರತದಲ್ಲಿ ಸಾಮರಸ್ಯ ಮತ್ತು ಸಹಿಷ್ಣುತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದು ದೇಶದ ಎಲ್ಲ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಹೇಳಿದರು.
ಸಮಾವೇಶದಲ್ಲಿ ಸಯ್ಯದ್ ಸಾದಾತ್ ತಂಜಳ್ ಗುರುವಾಯನಕೆರೆ, ಎಸ್.ವೈ.ಎಸ್.ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ ಝನೀ ಕಾಮಿಲ್, ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಟ, ಕೆಕೆಎಂ ಕಾಮಿಲ್ ಸಖಾಫಿ ಕೃಷ್ಣಾಪುರ ಮುಂತಾದವರು ಮಾತನಾಡಿದರು.ಝಿಕ್ರಾ ಅಕಾಡೆಮಿ ಅಧ್ಯಕ್ಷ ನೌಫಲ್ ಸಖಾಫಿ ಕಳಸ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)