ಮೂಡುಬಿದಿರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದಲ್ಲಿ ಮಹತ್ತರವಾದ ಒಂದು ಹಂತವಾಗಿದ್ದು ಯಾರೂ ಪರೀಕ್ಷೆಗಳನ್ನು ಕಳೆದುಕೊಳ್ಳಬಾರದು. ಗರಿಷ್ಠ ಅನುಕೂಲತೆಗಳನ್ನು ಬಳಸಿ ಪರೀಕ್ಷೆಗೆ ಹಾಜರಾಗಬೇಕು. ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕರಣ ಇತ್ಯರ್ಥಗೊಂಡು ಶೀಘ್ರವಾಗಿ ನಮಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ರಾಜ್ಯದ ವಿವಿಧ ಕಡೆಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಧ್ಯೆ ಮೂಡುಬಿದಿರೆ ಝಿಕ್ರಾ ಅಕಾಡೆಮಿಯಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಕಾಂತಪುರಂ ಉಸ್ತಾದರು ಸಲಹೆ ನೀಡಿದರು.
ಮುಸ್ಲಿಂ ಹೆಣ್ಮಕ್ಕಳಿಗೆ ಶಾಲ-ಕಾಲೇಜು ತರಗತಿ ಕೊಠಡಿಗಳಲ್ಲಿ ಹಿಜಾಬ್ ನಿರ್ಬಂಧಿಸಿ ಕರ್ನಾಟಕ ಹೈ ಕೋರ್ಟ್ ನಿಂದ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸಮುದಾಯದೊಳಗೆ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುವ ಹಂತಕ್ಕೆ ಬಂದು ನಿಂತಿದೆ.
ಈ ನಿಟ್ಟಿನಲ್ಲಿ ನಾವು ಸರಕಾರ ಮತ್ತು ನ್ಯಾಯಾಲಯದೊಂದಿಗೆ ಸಂಘರ್ಷಕ್ಕೆ ನಿಲ್ಲುವುದಿಲ್ಲ. ಸರಕಾರ ಮತ್ತು ನ್ಯಾಯಾಲಯದ ಕಡೆಯಿಂದ ಗೊಂದಲಕ್ಕೆ ತೆರೆ ಎಳೆದು ತಕ್ಷಣ ಸಂಧಾನದ ಮೂಲಕ ಸರ್ವರಿಗೂ ಸಮ್ಮತ ವಾಗುವ ರೀತಿಯ ಕ್ರಮವನ್ನು ನಿರೀಕ್ಷೆ ಮಾಡುವುದಾಗಿ ಅವರು ಹೇಳಿದರು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನ ಮೊರೆ ಹೋಗಲು ನಾವು ನಿರ್ಧರಿಸಿದ್ದೇವೆ. ಮರ್ಕಝ್ ಲಾ ಕಾಲೇಜಿನ ತಜ್ಞ ವಕೀಲರ ತಂಡ ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ. ಹಿಜಾಬ್ ವಿಚಾರವನ್ನು ಕಾನೂನಿನ ಮೂಲಕ ಎದುರಿಸಲು ಅವಕಾಶ ಮುಕ್ತವಾಗಿದೆ. ಆ ಬಗ್ಗೆ ಸಂವಿಧಾನ ನೀಡಿದ ಅವಕಾಶವನ್ನು ಬಳಸಿ ನಾವು ಮುಂದಡಿ ಇಡುತ್ತೇವೆ ಎಂದು ಅವರು ಸ್ಪಷ್ಟ ಪಡಿಸಿದರು.
ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿ ಪಡಿಸುವ ಬಲಿಷ್ಠ ಸಂವಿಧಾನ ಹೊಂದಿರುವ ಭಾರತದಲ್ಲಿ ಸಾಮರಸ್ಯ ಮತ್ತು ಸಹಿಷ್ಣುತೆಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದು ದೇಶದ ಎಲ್ಲ ಪ್ರಜ್ಞಾವಂತ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಹೇಳಿದರು.
ಸಮಾವೇಶದಲ್ಲಿ ಸಯ್ಯದ್ ಸಾದಾತ್ ತಂಜಳ್ ಗುರುವಾಯನಕೆರೆ, ಎಸ್.ವೈ.ಎಸ್.ಕರ್ನಾಟಕ ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ ಝನೀ ಕಾಮಿಲ್, ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ಟ, ಕೆಕೆಎಂ ಕಾಮಿಲ್ ಸಖಾಫಿ ಕೃಷ್ಣಾಪುರ ಮುಂತಾದವರು ಮಾತನಾಡಿದರು.ಝಿಕ್ರಾ ಅಕಾಡೆಮಿ ಅಧ್ಯಕ್ಷ ನೌಫಲ್ ಸಖಾಫಿ ಕಳಸ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ