ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ರಾಷ್ಟ್ರೀಯ ಸಮಿತಿ ಮತ್ತು ಪ್ರತಿಭೋತ್ಸವ ಸಮಿತಿ ಹಮ್ಮಿಕೊಂಡ ರಾಷ್ಟ್ರೀಯ ಮಟ್ಟ ಪ್ರತಿಭೋತ್ಸವ ವು 2022 ಮಾರ್ಚ್ 25 ರಂದು ಶುಕ್ರವಾರ ವಾರ ಜೌಹರ್ ಫಾರ್ಮ ಬರ್ಕ ದಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು.

ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ನಂತರ ನಡೆದ ಸೀನಿಯರ್ ಮತ್ತು ಜೂನಿಯರ್ ವಿಭಾಗದ ಇಸ್ಲಾಮಿಕ್ ಸಾಂಸ್ಕೃತಿಕ ಕಲರವ , ಬುರ್ದಾ ಮಜ್ಲಿಸ್ ಮತ್ತು ಮೌಲಿದ್ ಮಜ್ಲಿಸ್ ಕೆಸಿಎಫ್ ಒಮಾನ್ ನ ವಿವಿಧ ಝೋನ್ ಗಳಾದ ಮಸ್ಕತ್ ಝೋನ್, ನಿಝ್ವ ಝೋನ್, ಬೌಶರ್ ಝೋನ್, ಸೀಬ್ ಝೋನ್ ಮತ್ತು ಸೊಹಾರ್ ಝೋನ್ ಗಳ ನಡುವೆ ನಡೆದ ಜಿದ್ದಾ ಜಿದ್ದಿನ ಹೋರಾಟದಲ್ಲಿ ಸೀಬ್ ಝೋನ್ ಚಾಂಪಿಯನ್ ಶಿಪ್ ಪಡೆದು ಕೊಂಡರೆ ಸೊಹಾರ್ ಝೋನ್ ದ್ವಿತೀಯ ಸ್ಥಾನ ವನ್ನು ಪಡೆದು ನಿಝ್ವ ಝೋನ್ ತೃತೀಯ ಸ್ಥಾನ ಕ್ಕೆ ತೃಪ್ತಿ ಪಡಬೇಕಾಯಿತು.

ವೈಯಕ್ತಿಕ ಚಾಂಪಿಯನ್ ಆಗಿ ಇಸ್ಮಾಯಿಲ್ ಬಾಳೆಹೊನ್ನೂರು ಸೀಬ್ ಝೋನ್ ಇವರು ಪಡೆದು ಕೊಂಡರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಇಮಾಮ್ ನವವಿ ಮದರಸ ವಿದ್ಯಾರ್ಥಿಗಳಿಗೆ ಮತ್ತು ಸ್ತ್ರೀ ಯರೀಗೆ ಹಲವಾರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿತು. ನಂತರ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರೀಗೆ ಬಹುಮಾನವನ್ನು ಕೆಸಿಎಫ್ ಒಮಾನ್ ರಾಷ್ಟ್ರೀಯ ನಾಯಕರು ವಿತರಿಸಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಆಡಳಿತ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಬೊಲ್ಮಾರ್ ಬರ್ಕ, ICF ಒಮಾನ್ ನಾಯಕರಾದ ಜಮಾಲುದ್ದೀನ್ ಲತೀಫಿ, ತನ್ಝೀರ್ ಸಖಾಫಿ,ಹಾಗೂ ಅಬ್ದುಲ್ ರಝಾಕ್ ಮುಸ್ಲಿಯಾರ್, DKSC ಒಮಾನ್ ಅಧ್ಯಕ್ಷ ಮೋನಬ್ಬ ಹಾಜಿ ಇವರು ಉಪಸ್ಥಿತರಿದ್ದರು.
KCF ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, ಸಾಂತ್ವನ ವಿಭಾಗದ ಅಧ್ಯಕ್ಷ ಹಾಜಿ ಇಬ್ರಾಹಿಮ್ ಅತ್ರಾಡಿ,ಕಾರ್ಯದರ್ಶಿ ಇಕ್ಬಾಲ್ ಎರ್ಮಾಳ್, ಇಹ್ಸಾನ್ ವಿಂಗ್ ಅಧ್ಯಕ್ಷ ಹಂಝ ಹಾಜಿ ಕನ್ನಂಗಾರ್ , ಕಾರ್ಯದರ್ಶಿ ಇರ್ಫಾನ್ ಕೂರ್ನಡ್ಕ, ಸಂಘಟನಾ ವಿಭಾಗದ ಕಾರ್ಯದರ್ಶಿ ಸಂಶುದ್ದೀನ್ ಪಾಲ್ತಡ್ಕ, ಆಡಳಿತ ವಿಭಾಗದ ಕಾರ್ಯದರ್ಶಿ ಸಿದ್ದೀಕ್ ಮಾಂಬ್ಳಿ ಸುಳ್ಯ,ಪಬ್ಲಿಷಿಂಗ್ ವಿಭಾಗದ ಕಾರ್ಯದರ್ಶಿ ಶಫೀಕ್ ಮಾರ್ನಬೈಲು ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿವಿಧ ಝೋನ್ ಗಳ ಅಧ್ಯಕ್ಷರು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.
ಖತಮುಲ್ ಕುರ್ ಆನ್ ನ ವಾಟ್ಸಪ್ ಗ್ರೂಪ್ ಇದರ ಯಶಸ್ವಿಯಾಗಿ ನಿರ್ವಹಿಸಿದ ನವಾಝ್ ಮಣಿಪುರ ಹಾಗೂ ಸ್ವಲಾತ್ ಗ್ರೂಪ್ ಇದರ ಯಶಸ್ವಿ ನಿರ್ವಹಣೆ ಗೆ ಉಬೈದುಲ್ಲಾ ಸಖಾಫಿ ಮಿತ್ತೂರು ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು. ಕೆಸಿಎಫ್ ಒಮಾನ್ ರಾಷ್ಟ್ರೀಯ ಪ್ರತಿಭೋತ್ಸವ ಸಮಿತಿ ಚಯರ್ಮೆನ್ ಉಬೈದುಲ್ಲಾ ಸಖಾಫಿ ಮಿತ್ತೂರು ಸ್ವಾಗತಿಸಿ ಪ್ರತಿಭೋತ್ಸವ ಕನ್ಬೀನರ್ ಝುಬೈರ್ ಸ ಅದಿ ಪಾಟ್ರಕೋಡಿ ವಂದಿಸಿ ಕೊನೆಗೆ ಯಾ ಅಕ್ ರಮ ಬೈತ್ ನೊಂದಿಗೆ ಕೊನೆ ಗೊಂಡಿತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ