janadhvani

Kannada Online News Paper

ಇಂದು ಭಟ್ಕಳದಲ್ಲಿ ಎಸ್ಸೆಸ್ಸೆಫ್ ಡಿವಿಷನ್ ಕಾನ್ಪರೆನ್ಸ್

ಭಟ್ಕಳ: ಎಸ್ಸೆಸ್ಸೆಫ್ ಹಮ್ಮಿಕೊಂಡ ಡಿವಿಷನ್ ಕಾನ್ಫರೆನ್ಸ್ ಭಟ್ಕಳದ ಹಳೇ ಬಸ್ ನಿಲ್ದಾಣದ ಹತ್ತಿರ ಪಬ್ಲಿಕ್ ಚಬುತ್ರ ದಲ್ಲಿ ಇಂದು (ಮಾರ್ಚ್ 28) ನಡೆಯಲಿದೆ.

ಜಿಲ್ಲಾಧ್ಯಕ್ಷ ಆರಿಫ್ ಸಅದಿ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಅಸ್ಸಯದ್ ಅಲವಿ ತಂಙಳ್ ಕರ್ಕಿ ಅವರು ದುಆದೊಂದಿಗೆ ಚಾಲನೆ ನೀಡಲಿದ್ದಾರೆ.

ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಹಾಫಿಳ್ ಸುಫಿಯಾನ್ ಸಖಾಫಿ ಕಾವಲ್ಕಟ್ಟೆ ಅವರು “ಸಂವಿಧಾನ,ಧರ್ಮ,ರಾಜಕೀಯ” ಎಂಬ ವಿಷಯದಲ್ಲಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ರಾಜ್ಯ ಕಾರ್ಯದರ್ಶಿ ನವಾಝ್ ಭಟ್ಕಳ ಸ್ವಾಗತಿಸಿ ಜಿಲ್ಲಾ ಕಾರ್ಯದರ್ಶಿ ನಿಹಾರ್ ಭಟ್ಕಳ ವಂದಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.