ರಾಮನಗರ: ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು ಈಗ ಹಲಾಲ್ – ಜಟ್ಕಾ ಕಟ್ ಅಂತಿದ್ದೀರಲ್ಲ ನೀವು ನಿಮ್ಮ ಜಟ್ಕಾ ಮಾಡೋಕು, ಇನ್ನೊಂದು ಮಾಡೋಕು ಅವರೇ ಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಗಳು ಬರ್ತಾರಾ. ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನ ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ವಿಶ್ವ ಹಿಂದೂ ಪರಿಷತ್ನವರು ಭಜರಂಗದಳದವರು. ಇವರ ಹೊಟ್ಟೆಪಾಡಿಗೆ, ದೇಶ ಹಾಳು ಮಾಡಲು ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ಏನಾಗಿದೆ..? ಈಗ ಹಲಾಲ್ ತಿಂದರೆ ತೊಂದರೆ ಆಗುತ್ತದಾ..?, ನಮ್ಮ ದೇವರು ಮೆಚ್ಚಲ್ವಾ..? ಎಂದು ಪ್ರಶ್ನಿಸಿದ್ದಾರೆ.
ಇನ್ನು ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಆಗಲಿಲ್ಲ. ಆಗ ಎಲ್ಲಿದ್ದರೂ ವಿಶ್ವ ಹಿಂದೂ ಪರಿಷತ್, ಭಜರಂಗದಳದವರು. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದವನ್ನು ತಡೆಯಲಿ. ಸರ್ಕಾರ ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು, ಅದರ ಅರ್ಥ ಏನು. ಸಮಾಜ ಹೊಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ನನಗೆ ಮತ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ನಾನು ಮೌನವಾಗಿರಲು ಸಾಧ್ಯವಿಲ್ಲ. ಈ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ತಾಕತ್ತಿಲ್ಲ ಎಂದು ಕಿಡಿಕಾರಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ