ಬೆಂಗಳೂರು,ಏ.4: ರಾಜ್ಯದ ಜನತೆ ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ನಡುವೆಯೇ ಈಗ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ.
ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.
ವಿದ್ಯುತ್ ದರದ ಹೆಚ್ಚಳದ ಜೊತೆಗೆ ನಿಗದಿತ ಶುಲ್ಕವನ್ನು ಕೂಡ ಏರಿಕೆ ಮಾಡಲಾಗಿದೆ.
ಫಿಕ್ಸಿಡ್ ಚಾರ್ಜ್ ಅನ್ನೂ ರೂ.10 ರಿಂದ 30ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಕೆ ಇ ಆರ್ ಸಿ ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.
ರಾಜ್ಯ ಸರ್ಕಾರವು ಹಿಜಾಬ್, ಹಲಾಲ್ ಕಟ್ ಮತ್ತೆ ಇದೀಗ ಅಝಾನ್ ವಿವಾದಗಳನ್ನು ಹತೋಟಿಗೆ ತರಲು ಮುಂದಾಗದೆ, ಜನರ ಮಧ್ಯೆ ಕೋಮುಭಾವನೆ ಕೆರಳಿಸಿ, ಪರಸ್ಫರ ಕಚ್ಛಾಡಿಸಿ, ಇದರ ಮರೆಯಲ್ಲಿ ನಿತ್ಯೋಪಯೋಗಿ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಬಂದಿದೆ. ಇಂಧನ ಬೆಲೆ ಗಗನಕ್ಕೇರಿದೆ. ಆದರೆ, ಹಿಂದುತ್ವ ತಲೆಗಡರಿದ ಕೋಮುವಾದಿ ಶಕ್ತಿಗಳು ರಾಜ್ಯದ ಜನತೆಯ ಮಧ್ಯೆ ಕೋಮು ವಿಷಬೀಜವನ್ನು ಬಿತ್ತುತ್ತಿದ್ದು,ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸರ್ಕಾರ ಮೌನಿಯಾಗಿ ನಿಂತು ವಿಕೃತವಾಗಿ ಆನಂದಿಸುತ್ತಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ