ಬೆಂಗಳೂರು,ಏ.4: ರಾಜ್ಯದ ಜನತೆ ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ನಡುವೆಯೇ ಈಗ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ.
ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.
ವಿದ್ಯುತ್ ದರದ ಹೆಚ್ಚಳದ ಜೊತೆಗೆ ನಿಗದಿತ ಶುಲ್ಕವನ್ನು ಕೂಡ ಏರಿಕೆ ಮಾಡಲಾಗಿದೆ.
ಫಿಕ್ಸಿಡ್ ಚಾರ್ಜ್ ಅನ್ನೂ ರೂ.10 ರಿಂದ 30ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಕೆ ಇ ಆರ್ ಸಿ ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.
ರಾಜ್ಯ ಸರ್ಕಾರವು ಹಿಜಾಬ್, ಹಲಾಲ್ ಕಟ್ ಮತ್ತೆ ಇದೀಗ ಅಝಾನ್ ವಿವಾದಗಳನ್ನು ಹತೋಟಿಗೆ ತರಲು ಮುಂದಾಗದೆ, ಜನರ ಮಧ್ಯೆ ಕೋಮುಭಾವನೆ ಕೆರಳಿಸಿ, ಪರಸ್ಫರ ಕಚ್ಛಾಡಿಸಿ, ಇದರ ಮರೆಯಲ್ಲಿ ನಿತ್ಯೋಪಯೋಗಿ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಬಂದಿದೆ. ಇಂಧನ ಬೆಲೆ ಗಗನಕ್ಕೇರಿದೆ. ಆದರೆ, ಹಿಂದುತ್ವ ತಲೆಗಡರಿದ ಕೋಮುವಾದಿ ಶಕ್ತಿಗಳು ರಾಜ್ಯದ ಜನತೆಯ ಮಧ್ಯೆ ಕೋಮು ವಿಷಬೀಜವನ್ನು ಬಿತ್ತುತ್ತಿದ್ದು,ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸರ್ಕಾರ ಮೌನಿಯಾಗಿ ನಿಂತು ವಿಕೃತವಾಗಿ ಆನಂದಿಸುತ್ತಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ