ಬೆಂಗಳೂರು,ಏ.4: ರಾಜ್ಯದ ಜನತೆ ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ನಡುವೆಯೇ ಈಗ ವಿದ್ಯುತ್ ದರ ಏರಿಕೆಯ ಬಿಸಿಮುಟ್ಟಿದ್ದು ಇಂದು ಪ್ರತಿ ಯೂನಿಟ್ ಗೆ 35 ಪೈಸೆ ದರವನ್ನು ಹೆಚ್ಚಳ ಮಾಡಲಾಗಿದೆ. ಈ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.
ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ವಿದ್ಯುತ್ ದರ ಪರಿಷ್ಕರಣೆ ಸಂಬಂಧ ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಪ್ರತಿ ಯೂನಿಟ್ ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳದ ಮಹತ್ವದ ಘೋಷಣೆಯನ್ನು ಘೋಷಿಸಿದೆ. ಏಪ್ರಿಲ್ 1ರಿಂದ ಈ ದರ ಏರಿಕೆ ಜಾರಿಗೆ ಬರಲಿದೆ.
ಜೆಸ್ಕಾ, ಮೆಸ್ಕಾಂ, ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿದಂ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಲಾಗಿದೆ.
ವಿದ್ಯುತ್ ದರದ ಹೆಚ್ಚಳದ ಜೊತೆಗೆ ನಿಗದಿತ ಶುಲ್ಕವನ್ನು ಕೂಡ ಏರಿಕೆ ಮಾಡಲಾಗಿದೆ.
ಫಿಕ್ಸಿಡ್ ಚಾರ್ಜ್ ಅನ್ನೂ ರೂ.10 ರಿಂದ 30ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಕೆ ಇ ಆರ್ ಸಿ ವಿದ್ಯುತ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.
ರಾಜ್ಯ ಸರ್ಕಾರವು ಹಿಜಾಬ್, ಹಲಾಲ್ ಕಟ್ ಮತ್ತೆ ಇದೀಗ ಅಝಾನ್ ವಿವಾದಗಳನ್ನು ಹತೋಟಿಗೆ ತರಲು ಮುಂದಾಗದೆ, ಜನರ ಮಧ್ಯೆ ಕೋಮುಭಾವನೆ ಕೆರಳಿಸಿ, ಪರಸ್ಫರ ಕಚ್ಛಾಡಿಸಿ, ಇದರ ಮರೆಯಲ್ಲಿ ನಿತ್ಯೋಪಯೋಗಿ ವಸ್ತುಗಳ ಬೆಲೆಯನ್ನು ಏರಿಸುತ್ತಲೇ ಬಂದಿದೆ. ಇಂಧನ ಬೆಲೆ ಗಗನಕ್ಕೇರಿದೆ. ಆದರೆ, ಹಿಂದುತ್ವ ತಲೆಗಡರಿದ ಕೋಮುವಾದಿ ಶಕ್ತಿಗಳು ರಾಜ್ಯದ ಜನತೆಯ ಮಧ್ಯೆ ಕೋಮು ವಿಷಬೀಜವನ್ನು ಬಿತ್ತುತ್ತಿದ್ದು,ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸರ್ಕಾರ ಮೌನಿಯಾಗಿ ನಿಂತು ವಿಕೃತವಾಗಿ ಆನಂದಿಸುತ್ತಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)