ನವದೆಹಲಿ, ಏ. 4: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ಇಂದು ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಬಳಿಕ ಮಾತನಾಡಿದ ಅವರು ದೆಹಲಿ ಮತ್ತು ಪಂಜಾಬ್ ರೀತಿ ಕರ್ನಾಟಕದಲ್ಲೂ ಬದಲಾವಣೆ ಆಗಬೇಕಿದೆ. ಕರ್ನಾಟಕದ ಜನ ಬದಲಾವಣೆಯನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದರು.
ಭಾಸ್ಕರ್ ರಾವ್ ಅವರು ಬೆಳಿಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆಮ್ ಆದ್ಮಿ ಪಕ್ಷದ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ಸಂಚಾಲಕ ಪೃಥ್ವಿ ರೆಡ್ಡಿ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ಬಳಿಕ ಮನೀಷ್ ಸಿಸೋಡಿಯಾ ಮತ್ತಿತರ ಜೊತೆ ಸುದ್ದಿಗೋಷ್ಠಿ ನಡೆಸಿ ತಾವು ಆಮ್ ಆದ್ಮಿ ಪಕ್ಷ ಸೇರಿದ್ದು ಏಕೆ ಎಂದು ವಿವರಿಸಿದರು. ಆಮ್ ಆದ್ಮಿ ಪಕ್ಷದ ಸಾಧನೆಗೆ ದೇಶದೆಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಅರವಿಂದ ಕೇಜ್ರಿವಾಲ್ ಅವರ ಬಗ್ಗೆ ವಿದೇಶಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ. ಕರ್ನಾಟಕದ ಆಡಳಿತದ ಬಗ್ಗೆಯೂ ಇಂಥದೇ ಮೆಚ್ಚುಗೆ ವ್ಯಕ್ತವಂತಾಗಬೇಕು ಎಂದು ಹೇಳಿದರು.
ರಾಜ್ಯದಲ್ಲಿ 3 ಪಕ್ಷಗಳ ಬಗ್ಗೆ ಜನಬೇಸರ ಗೊಂಡಿದ್ದಾರೆ
ಕರ್ನಾಟಕದಲ್ಲಿ ಎಲ್ಲಾ ರೀತಿಯ ಸಂಪನ್ಮೂಲ ಇದೆ. ಆದರೆ ಸ್ವಚ್ಚ ನಾಯಕತ್ವದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ನಾನು ಆಮ್ ಆದ್ಮಿ ಪಕ್ಷವನ್ನು ಸೇರಿದ್ದೇನೆ. ಅರವಿಂದ ಕೇಜ್ರಿವಾಲ್ ಅವರ ನಾಯಕತ್ವವನ್ನು ಮೆಚ್ಚಿ ಆಪ್ ಸೇರ್ಪಡೆ ಆಗಿದ್ದೇನೆ. ಕರ್ನಾಟಕದಲ್ಲಿ 3 ಪಕ್ಷಗಳ ಬಗ್ಗೆ ಜನಬೇಸರ ಗೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಬಹಳ ಹೆಚ್ಚಾಗಿದೆ. ಇದನ್ನು ನೋಡಿ ರಾಜ್ಯದ ಜನ 3 ಪಕ್ಷಗಳ ಬಗ್ಗೆ ಬೇಸರ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 3 ಪಕ್ಷಗಳು ಅಂದರ್ ಬಾಹರ್ ಆಡುತ್ತಿವೆ. ನಿಜಕ್ಕೂ ಈಗ ಕರ್ನಾಟಕದಲ್ಲಿ ಬದಲಾವಣೆ ಆಗಬೇಕಿದೆ. ಜನರಿಗೆ ಬದಲಾವಣೆ ಬೇಕಾಗಿದೆ ಎಂದು ಹೇಳಿದರು.
ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದ ನಗರ. ಆದರೆ ಅಲ್ಲಿನ ದುರಾಡಳಿತದಿಂದ ಬೆಳವಣಿಗೆ ಆಗುತ್ತಿಲ್ಲ. ನಾನು ಇದಕ್ಕಾಗಿ ಅಧಿಕಾರಿಗಳ ವರ್ಗವನ್ನು ದೂರುವುದಿಲ್ಲ. ರಾಜಕೀಯ ನಾಯಕತ್ವ ಸರಿಯಾಗಿಲ್ಲದ ಕಾರಣಕ್ಕೆ ಹೀಗಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಸುಧಾರಣೆ ಆಗಬೇಕು ಎಂಬ ಹಿನ್ನೆಲೆಯಲ್ಲಿ ನಾನು ಆಮ್ ಆದ್ಮಿ ಪಕ್ಷವನ್ನು ಸೇರಿದ್ದೇನೆ. ನನಗೆ ಅವಕಾಶ ಮಾಡಿಕೊಟ್ಟ ಅರವಿಂದ ಕೇಜ್ರಿವಾಲ್ ಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ದೆಹಲಿ ಡಿಸಿಎಂ ಮನಿಶ್ ಸಿಸೋಡಿಯಾ ಅವರು ಮಾತನಾಡಿ ಆಮ್ ಆದ್ಮಿ ಪಕ್ಷದ ಬಗ್ಗೆ ದಕ್ಷಿಣದ ರಾಜ್ಯಗಳಲ್ಲಿ ಚರ್ಚೆ ಆಗುತ್ತಿದೆ. ಭಾಸ್ಕರ್ ರಾವ್ ಅವರು ಐಪಿಎಸ್ ಹುದ್ದೆ ತೊರೆದು ಆಮ್ ಆದ್ಮಿ ಪಕ್ಷ ಸೇರಿದ್ದಾರೆ. ದೆಹಲಿಯಲ್ಲಿ ನಮ್ಮ ಪಕ್ಷದ ಸರಕಾರ ಮಾಡಿರುವ ಕೆಲಸಗಳನ್ನು ನೋಡಿ ಪಕ್ಷ ಸೇರಿದ್ದಾರೆ. ದೆಹಲಿಯ ಶಾಲೆಗಳಲ್ಲಿ ಆಗಿರುವ ಬದಲಾವಣೆ ನೋಡಿ ಪಕ್ಷ ಸೇರಿದ್ದಾರೆ. ಭಾಸ್ಕರ್ ರಾವ್ ಪೋಲಿಸ್ ಕಮಿಷನರ್ ಆಗಿರಲಿಲ್ಲ, ಪೀಪಲ್ಸ್ ಕಮೀಷನ್ ಆಗಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
1990ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿರುವ ಭಾಸ್ಕರ್ ರಾವ್ ಸೇವಾ ನಿವೃತ್ತಿಗೆ ಇನ್ನೂ ಮೂರು ವರ್ಷ ಇರುವಂತೆಯೇ ಸ್ವಯಂ ನಿವೃತ್ತಿ ಘೋಷಿಸಿ, ರಾಜಕೀಯ ಪ್ರವೇಶಕ್ಕೆ ಮುಂದಾಗಿದ್ದಾರೆ. ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಸೇವೆ ಸಲ್ಲಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ