ಬೆಂಗಳೂರು: ಮದ್ರಸಾಗಳನ್ನು ಹೊಂದಿರುವ ವಖ್ಫ್ ನ ಸಂಸ್ಥೆಗಳಲ್ಲಿ ಅವಕಾಶವಿದ್ದರೆ ಅಲ್ಲಿ ಹೆಣ್ಣು ಮಕ್ಕಳಿಗಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ. ಮುಹಮ್ಮದ್ ಶಾಫಿ ಸಅದಿ ತಿಳಿಸಿದ್ದಾರೆ.
ರಾಜ್ಯ ವಖ್ಫ್ ಬೋರ್ಡ್ ನ ಕಚೇರಿಯಲ್ಲಿ ಎರಡು ದಿನಗಳ ಕಾಲ ನಡೆದ ಸದಸ್ಯರ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರವಸ್ತ್ರಕ್ಕೆ ಸಂಬಂಧಿಸಿ ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಿದರು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿರುವ ವಖ್ಫ್ ನ ಖಾಲಿ ಜಾಗಗಳಲ್ಲಿ ಸ್ಥಳೀಯ ವಖ್ಫ್ ಸಂಸ್ಥೆಗಳ ಮೂಲಕ ಹೆಣ್ಣು ಮಕ್ಕಳಿಗಾಗಿ ಶಾಲಾ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಅವರಿಗೆ ನೈತಿಕವಾಗಿ ಬೆಂಬಲ ನೀಡಲು ವಖ್ಫ್ ಬೋರ್ಡ್ ಸದಸ್ಯರಾದ ಸಂಸದ ಸೈಯದ್ ನಾಸೀರ್ ಹುಸೇನ್, ಅಬ್ದುಲ್ ರಿಯಾಝ್ ಖಾನ್ ದೇಶದ ಹಿರಿಯ ವಕೀಲರೊಂದಿಗೆ ಸಭೆಯನ್ನು ನಡೆಸಿದ್ದಾರೆ.
ಇದು ಕಾನೂನು ಹೋರಾಟಕ್ಕೆ ನೆರವು ನೀಡಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ವಖ್ಫ್ ಆಸ್ತಿಗಳಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯ ನಿಟ್ಟಿನಲ್ಲಿ ಸಮುದಾಯದ ಗಣ್ಯರ ಜೊತೆಯೂ ಸಭೆಯನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕೆಲವು ಮತೀಯ ಸಂಘಟನೆಗಳು ರಾಜ್ಯದಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ ಕೆಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಸಾರುವ “ಇಫ್ತಾರ್ ಸಂಗಮ”ವನ್ನು ನಡೆಸಲು ರಾಜ್ಯದ ಎಲ್ಲಾ ವಖ್ಫ್ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ