ಬೆಂಗಳೂರು: ಮದ್ರಸಾಗಳನ್ನು ಹೊಂದಿರುವ ವಖ್ಫ್ ನ ಸಂಸ್ಥೆಗಳಲ್ಲಿ ಅವಕಾಶವಿದ್ದರೆ ಅಲ್ಲಿ ಹೆಣ್ಣು ಮಕ್ಕಳಿಗಾಗಿ ಶಾಲಾ ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ. ಮುಹಮ್ಮದ್ ಶಾಫಿ ಸಅದಿ ತಿಳಿಸಿದ್ದಾರೆ.
ರಾಜ್ಯ ವಖ್ಫ್ ಬೋರ್ಡ್ ನ ಕಚೇರಿಯಲ್ಲಿ ಎರಡು ದಿನಗಳ ಕಾಲ ನಡೆದ ಸದಸ್ಯರ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರವಸ್ತ್ರಕ್ಕೆ ಸಂಬಂಧಿಸಿ ಸರಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಿದರು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿರುವ ವಖ್ಫ್ ನ ಖಾಲಿ ಜಾಗಗಳಲ್ಲಿ ಸ್ಥಳೀಯ ವಖ್ಫ್ ಸಂಸ್ಥೆಗಳ ಮೂಲಕ ಹೆಣ್ಣು ಮಕ್ಕಳಿಗಾಗಿ ಶಾಲಾ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಅವರಿಗೆ ನೈತಿಕವಾಗಿ ಬೆಂಬಲ ನೀಡಲು ವಖ್ಫ್ ಬೋರ್ಡ್ ಸದಸ್ಯರಾದ ಸಂಸದ ಸೈಯದ್ ನಾಸೀರ್ ಹುಸೇನ್, ಅಬ್ದುಲ್ ರಿಯಾಝ್ ಖಾನ್ ದೇಶದ ಹಿರಿಯ ವಕೀಲರೊಂದಿಗೆ ಸಭೆಯನ್ನು ನಡೆಸಿದ್ದಾರೆ.
ಇದು ಕಾನೂನು ಹೋರಾಟಕ್ಕೆ ನೆರವು ನೀಡಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ವಖ್ಫ್ ಆಸ್ತಿಗಳಲ್ಲಿ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯ ನಿಟ್ಟಿನಲ್ಲಿ ಸಮುದಾಯದ ಗಣ್ಯರ ಜೊತೆಯೂ ಸಭೆಯನ್ನು ನಡೆಸಲಾಗುವುದು ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಕೆಲವು ಮತೀಯ ಸಂಘಟನೆಗಳು ರಾಜ್ಯದಲ್ಲಿ ಹಿಂದೂ ಮುಸ್ಲಿಂ ಸಾಮರಸ್ಯ ಕೆಡಿಸುತ್ತಿರುವ ಘಟನೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಸಮಾಜದಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಸಾರುವ “ಇಫ್ತಾರ್ ಸಂಗಮ”ವನ್ನು ನಡೆಸಲು ರಾಜ್ಯದ ಎಲ್ಲಾ ವಖ್ಫ್ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)