ಧಾರವಾಡ,ಏ.11: ನುಗ್ಗಿಕೇರಿ ಆಂಜನೇಯ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿದ ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಅಲ್ಲಿನ ಪರ್ಯಾಯಸ್ಥರೊಂದಿಗೆ ಚರ್ಚಿಸಿದರು.
‘ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾದ ಧಾರವಾಡದಲ್ಲಿ ಇಂಥ ಘಟನೆಗಳು ನಡೆಯಬಾರದಿತ್ತು. ಈ ದೇವಾಲಯ ತನ್ನ ಕೀರ್ತಿಗೆ ಜಗತ್ಪ್ರಸಿದ್ಧವಾಗಬೇಕೇ ಹೊರತು, ಇಂಥ ಅಪಕೀರ್ತಿಗಲ್ಲ. ಹೀಗಾಗಿ ಇಲ್ಲಿ ಸೌಹಾರ್ದತೆ ನೆಲೆಸುವಂತೆ ಸಮಾಜದ ಪ್ರತಿಯೊಬ್ಬರೂ ಸೇರಿ ಕೆಲಸ ಮಾಡಬೇಕಿದೆ’ ಎಂದು ಇಸ್ಮಾಯಿಲ್ ತಮಟಗಾರ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪರ್ಯಾಯಸ್ಥ ನರಸಿಂಹ ದೇಸಾಯಿ, ‘ಇಲ್ಲಿ ಎಲ್ಲಾ ಸಮುದಾಯವರಿಗೂ ಅವಕಾಶ ಮಾಡಿಕೊಡಲಾಗಿದೆ. ನಮ್ಮ ಉದ್ದೇಶವೂ ಪ್ರತಿಯೊಬ್ಬರೂ ಸೋದರರಂತೆ ಬಾಳುವುದೇ ಆಗಿದೆ. ಈ ಕುರಿತು 12 ಜನ ಪರ್ಯಾಯಸ್ಥರು ಸಭೆ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.
ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ‘ಖಾಸಗಿ ಟ್ರಸ್ಟ್ ಆಗಿರುವ ನುಗ್ಗಿಕೇರಿ ದೇವಾಲಯದಲ್ಲಿ ನಡೆದಿರುವುದು ಒಂದು ಆಕಸ್ಮಿಕ ಘಟನೆ. ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಂಥ ಘಟನೆ ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ