ಧಾರವಾಡ,ಏ.11: ನುಗ್ಗಿಕೇರಿ ಆಂಜನೇಯ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿದ ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಅಲ್ಲಿನ ಪರ್ಯಾಯಸ್ಥರೊಂದಿಗೆ ಚರ್ಚಿಸಿದರು.
‘ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾದ ಧಾರವಾಡದಲ್ಲಿ ಇಂಥ ಘಟನೆಗಳು ನಡೆಯಬಾರದಿತ್ತು. ಈ ದೇವಾಲಯ ತನ್ನ ಕೀರ್ತಿಗೆ ಜಗತ್ಪ್ರಸಿದ್ಧವಾಗಬೇಕೇ ಹೊರತು, ಇಂಥ ಅಪಕೀರ್ತಿಗಲ್ಲ. ಹೀಗಾಗಿ ಇಲ್ಲಿ ಸೌಹಾರ್ದತೆ ನೆಲೆಸುವಂತೆ ಸಮಾಜದ ಪ್ರತಿಯೊಬ್ಬರೂ ಸೇರಿ ಕೆಲಸ ಮಾಡಬೇಕಿದೆ’ ಎಂದು ಇಸ್ಮಾಯಿಲ್ ತಮಟಗಾರ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪರ್ಯಾಯಸ್ಥ ನರಸಿಂಹ ದೇಸಾಯಿ, ‘ಇಲ್ಲಿ ಎಲ್ಲಾ ಸಮುದಾಯವರಿಗೂ ಅವಕಾಶ ಮಾಡಿಕೊಡಲಾಗಿದೆ. ನಮ್ಮ ಉದ್ದೇಶವೂ ಪ್ರತಿಯೊಬ್ಬರೂ ಸೋದರರಂತೆ ಬಾಳುವುದೇ ಆಗಿದೆ. ಈ ಕುರಿತು 12 ಜನ ಪರ್ಯಾಯಸ್ಥರು ಸಭೆ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.
ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ‘ಖಾಸಗಿ ಟ್ರಸ್ಟ್ ಆಗಿರುವ ನುಗ್ಗಿಕೇರಿ ದೇವಾಲಯದಲ್ಲಿ ನಡೆದಿರುವುದು ಒಂದು ಆಕಸ್ಮಿಕ ಘಟನೆ. ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಂಥ ಘಟನೆ ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ