ಮಂಗಳೂರು: ಉನ್ನತ ವಿದ್ವಾಂಸರೂ, ಹಲವಾರು ಮೊಹಲ್ಲಾಗಳಲ್ಲಿ ಮುದರ್ರಿಸರಾಗಿ ಸೇವೆ ಗೈದಿರುವ ಬಹು ಪಿ.ಎಸ್ ಇಬ್ರಾಹೀಂ ಮದನಿ ತುರ್ಕಳಿಕೆ(60) ವಫಾತಾದರು.
ಅಜಿಲಮುಗೇರು, ಉರುವಾಲು ಪದವು, ಚಿಕ್ಕಮಗಳೂರು ಆಲ್ ದೂರು, ಕೊಂಡಂಗೇರಿ ಮುಂತಾದ ಮೊಹಲ್ಲಾಗಳಲ್ಲಿ ಮುದರ್ರಿಸರಾಗಿ ಸೇವೆ ಗೈದಿದ್ದಾರೆ. ಪ್ರಮುಖ ವಿದ್ವಾಂಸರಾದ ಮರ್ಹೂಂ ಪಿ.ಎ.ಉಸ್ತಾದ್ ಕುಂಬೋಲ್ ಮತ್ತು ಮರ್ಹೂಮ್ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಗುರುವರ್ಯರಾಗಿದ್ದರು.
ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಸದಸ್ಯರೂ, ಮದನೀಸ್ ಕರ್ನಾಟಕ ರಾಜ್ಯ ಸಮಿತಿಯ ಕ್ಷೇಮನಿಧಿ ವಿಭಾಗದ ಅಧ್ಯಕ್ಷರು, ಬೆಳ್ತಂಗಡಿ ತಾಲೂಕು ಮದನೀಸ್ ಕೋಶಾಧಿಕಾರಿಯೂ ಆಗಿ ಸಂಘಟನಾ ರಂಗದಲ್ಲಿ ಕಾರ್ಯಾಚರಿಸುತ್ತಿದ್ದರು.
ಅವರು ಪತ್ನಿ, ಆರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನೂ ಶಿಷ್ಯ ವೃಂದವನ್ನೂ ಅಗಲಿದ್ದಾರೆ. ಮಹಾನರ ವಫಾತಿಗೆ ಮದನೀಸ್ ಕೇಂದ್ರ ಸಮಿತಿ ತೀವ್ರ ಸಂತಾಪ ಸೂಚಿಸಿದ್ದು, ಅವರ ಹೆಸರಲ್ಲಿ ಖುರ್ ಆನ್ ಪಾರಾಯಣ, ತಹ್ಲೀಲ್, ಹಾಗೂ ಪ್ರತ್ಯೇಕ ದುಆ ನಡೆಸುವಂತೆ ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಅಧ್ಯಕ್ಷರಾದ ಸಯ್ಯಿದ್ ಅಬೂಬಕರ್ ಸಿದ್ದೀಕ್ ತಂಙ್ಙಳ್ ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಎ.ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್