ಉಡುಪಿ: ನಮ್ಮ ಸಹೋದರ, ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅಲ್ಲಿಯ ತನಕ ಲಾಡ್ಜ್ನಿಂದ ಮೃತದೇಹವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಮೃತರ ಸಹೋದರ ಸಂಬಂಧಿ ಪ್ರಶಾಂತ್ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆಯಿಂದ ಪಂಚನಾಮೆ ನಡೆಯುತ್ತಿದ್ದು, ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.ಪೊಲೀಸ್ ತನಿಖೆಗೆ ಕುಟುಂಬಸ್ಥರು ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಈಗ ಪೊಲೀಸ್ ಇಲಾಖೆ ಕೂಡ ನಮಗೆ ಸಹಕಾರ ಕೊಡಬೇಕು. ಎಫ್ಐಆರ್ನಲ್ಲಿ ಹೆಸರು ಇರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ತಾಕೀತು ಮಾಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಎಲ್ಲ ರೀತಿಯ ಸಹಕಾರವನ್ನು ಕೊಟ್ಟಿದ್ದೇವೆ. ಮುಂದೆಯೂ ಕೊಡುತ್ತೇವೆ. ಈಗಾಗಲೇ ಲಾಡ್ಜ್ನಲ್ಲಿ ಸಿಕ್ಕಿರುವ ವಸ್ತುಗಳು, ನಮ್ಮ ಸಹೋದರ ಸಂತೋಷ್ ಪಾಟೀಲ್ ಅವರು ಕಳುಹಿಸಿರುವ ವಾಟ್ಸಾಪ್ ಸಂದೇಶಗಳು ಹಾಗೂ ಇತರೆ ಸಾಕ್ಷ್ಯಗಳ ಬಗ್ಗೆ ನಾವೂ ಕೂಡ ಮೊಬೈಲ್ನಲ್ಲಿ ಚಿತ್ರ ಇಟ್ಟುಕೊಂಡಿದ್ದೇವೆ. ಈಗಿರುವ ಪ್ರಾಥಮಿಕ ಮಾಹಿತಿಯಂತೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ನಾವು ಯಾರ ಮೇಲೆ ದೂರು ಕೊಟ್ಟಿದ್ದೇವೆಯೋ ಅವರನ್ನು ಕೂಡಲೇ ಪೊಲೀಸರು ಬಂಧಿಸಬೇಕು. ಪೊಲೀಸರು ಹೇಳಿದಂತೆ ನಾವು ಎಲ್ಲ ರೀತಿಯ ಸಹಕಾರ ಕೊಟ್ಟಿದ್ದೇವೆ. ಈಗ ನಾವು ಪೊಲೀಸರನ್ನು ಕೇಳುತ್ತಿರುವುದು ಇಷ್ಟೇ. ಯಾರು ಯಾರು ಆರೋಪಿಗಳಿದ್ದಾರೋ ಅವರನ್ನು ಬಂಧಿಸದ ಹೊರತು ಲಾಡ್ಜ್ನಿಂದ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಸಹೋದರ ತಿಳಿಸಿದರು.
ಸಂತೋಷ್ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದರು. ಕಾಮಗಾರಿ ಪೂರ್ಣಗೊಂಡರೂ ವರ್ಕ್ ಆರ್ಡರ್, ಹಾಗೂ ಬಿಲ್ ಪಾವತಿ ಆಗಿರಲಿಲ್ಲ. ವರ್ಕ್ ಆರ್ಡರ್ ಹಾಗೂ ಬಿಲ್ ಪಾಸ್ ಮಾಡಲು 40% ಕಮಿಷನ್ ಬೇಡಿಕೆಯನ್ನು ಸಚಿವ ಕೆ.ಎಸ್ ಈಶ್ವರಪ್ಪ, ಅವರ ಪಿಎಗಳು ಇಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು.
ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರವನ್ನು ಬರೆದಿದ್ದರು. ಆದರೆ ಈ ಆರೋಪವನ್ನು ಸಚಿವ ಈಶ್ವರಪ್ಪ ನಿರಾಕರಿಸಿದ್ದರು. ಅಷ್ಟೇ ಅಲ್ಲದೆ ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ