ಉಡುಪಿ: ನಮ್ಮ ಸಹೋದರ, ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅಲ್ಲಿಯ ತನಕ ಲಾಡ್ಜ್ನಿಂದ ಮೃತದೇಹವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಮೃತರ ಸಹೋದರ ಸಂಬಂಧಿ ಪ್ರಶಾಂತ್ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆಯಿಂದ ಪಂಚನಾಮೆ ನಡೆಯುತ್ತಿದ್ದು, ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.ಪೊಲೀಸ್ ತನಿಖೆಗೆ ಕುಟುಂಬಸ್ಥರು ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಈಗ ಪೊಲೀಸ್ ಇಲಾಖೆ ಕೂಡ ನಮಗೆ ಸಹಕಾರ ಕೊಡಬೇಕು. ಎಫ್ಐಆರ್ನಲ್ಲಿ ಹೆಸರು ಇರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ತಾಕೀತು ಮಾಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಎಲ್ಲ ರೀತಿಯ ಸಹಕಾರವನ್ನು ಕೊಟ್ಟಿದ್ದೇವೆ. ಮುಂದೆಯೂ ಕೊಡುತ್ತೇವೆ. ಈಗಾಗಲೇ ಲಾಡ್ಜ್ನಲ್ಲಿ ಸಿಕ್ಕಿರುವ ವಸ್ತುಗಳು, ನಮ್ಮ ಸಹೋದರ ಸಂತೋಷ್ ಪಾಟೀಲ್ ಅವರು ಕಳುಹಿಸಿರುವ ವಾಟ್ಸಾಪ್ ಸಂದೇಶಗಳು ಹಾಗೂ ಇತರೆ ಸಾಕ್ಷ್ಯಗಳ ಬಗ್ಗೆ ನಾವೂ ಕೂಡ ಮೊಬೈಲ್ನಲ್ಲಿ ಚಿತ್ರ ಇಟ್ಟುಕೊಂಡಿದ್ದೇವೆ. ಈಗಿರುವ ಪ್ರಾಥಮಿಕ ಮಾಹಿತಿಯಂತೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ನಾವು ಯಾರ ಮೇಲೆ ದೂರು ಕೊಟ್ಟಿದ್ದೇವೆಯೋ ಅವರನ್ನು ಕೂಡಲೇ ಪೊಲೀಸರು ಬಂಧಿಸಬೇಕು. ಪೊಲೀಸರು ಹೇಳಿದಂತೆ ನಾವು ಎಲ್ಲ ರೀತಿಯ ಸಹಕಾರ ಕೊಟ್ಟಿದ್ದೇವೆ. ಈಗ ನಾವು ಪೊಲೀಸರನ್ನು ಕೇಳುತ್ತಿರುವುದು ಇಷ್ಟೇ. ಯಾರು ಯಾರು ಆರೋಪಿಗಳಿದ್ದಾರೋ ಅವರನ್ನು ಬಂಧಿಸದ ಹೊರತು ಲಾಡ್ಜ್ನಿಂದ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಸಹೋದರ ತಿಳಿಸಿದರು.
ಸಂತೋಷ್ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದರು. ಕಾಮಗಾರಿ ಪೂರ್ಣಗೊಂಡರೂ ವರ್ಕ್ ಆರ್ಡರ್, ಹಾಗೂ ಬಿಲ್ ಪಾವತಿ ಆಗಿರಲಿಲ್ಲ. ವರ್ಕ್ ಆರ್ಡರ್ ಹಾಗೂ ಬಿಲ್ ಪಾಸ್ ಮಾಡಲು 40% ಕಮಿಷನ್ ಬೇಡಿಕೆಯನ್ನು ಸಚಿವ ಕೆ.ಎಸ್ ಈಶ್ವರಪ್ಪ, ಅವರ ಪಿಎಗಳು ಇಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು.
ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರವನ್ನು ಬರೆದಿದ್ದರು. ಆದರೆ ಈ ಆರೋಪವನ್ನು ಸಚಿವ ಈಶ್ವರಪ್ಪ ನಿರಾಕರಿಸಿದ್ದರು. ಅಷ್ಟೇ ಅಲ್ಲದೆ ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ