ಬೆಂಗಳೂರು: ವಿಪಕ್ಷಗಳ ತೀವ್ರ ಒತ್ತಾಯ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಸಿಎಂ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆ ಈಶ್ವರಪ್ಪ ಖಡಕ್ ಆಗಿ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇಂದು ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಶುಕ್ರವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು. ಗುರುವಾರ ಬೆಳಗ್ಗೆ ಸಿಎಂ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕುವ ರ್ಯಾಲಿ ಕೂಡ ನಡೆಸಿದ್ದರು.
ಇದೇ ಏ.16, 17 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಈಶ್ವರಪ್ಪ ಪ್ರಕರಣದಿಂದ ತಮ್ಮ ಭೇಟಿಯ ಸಂದರ್ಭದಲ್ಲಿ ಮುಜುಗರಕ್ಕೆ ಈಡಾಗಬಹುದು ಎಂಬ ಕಾರಣದಿಂದ ರಾಜೀನಾಮೆ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಈಶ್ವರಪ್ಪ ಅವರಿಗೆ ಫೋನ್ ಕರೆ ಮಾಡಿ ತಿಳಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ