ಮಂಗಳೂರು: ಎಸ್ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟ ಕಾರ್ಮಿಕರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದ್ದು, ಸಮಿರುಲ್ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ. ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಎಸ್ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ.
ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟು 5 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಪೊಲೀಸರ ದೌಡು:
ರಾಸಾಯನಿಕ ಸೋರಿಕೆಯಾದ ಮಾಹಿತಿ ಸಿಗುತ್ತಿದ್ದಂತೆ ನಗರ ಪೊಲೀಸರು ಆಸ್ಪತ್ರೆ, ಫ್ಯಾಕ್ಟರಿಗೆ ದೌಡಾಯಿಸಿದ್ದಾರೆ. ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಆಸ್ಪತ್ರೆಗೆ ಭೇಟಿ ಅನಾರೋಗ್ಯಕ್ಕೀಡಾದವರ ಯೋಗಕ್ಷೇಮ ವಿಚಾರಿಸಿದ್ದಾರೆ. ಡಿಸಿಪಿ ಹರಿರಾಂ ಶಂಕರ್, ಬಜಪೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ತ್ಯಾಜ್ಯದಿಂದ ವಿಷಾನಿಲ:
ಮೀನಿನ ತ್ಯಾಜ್ಯಕ್ಕೆ ಬಳಕೆ ಮಾಡುವ ವಿಷಾನಿಲ ಸೋರಿಕೆಯಾಗಿ ಈ ಘಟನೆ ನಡೆದಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಯ ಸರಿಯಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ. ಅವಘಡ ನಡೆದ ಹಿನ್ನಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ