ಬಂಟ್ವಾಳ: ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ಅಧೀನದಲ್ಲಿ ಮಾರ್ಚ್ ತಿಂಗಳಲ್ಲಿ ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಐದು, ಏಳು ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ ವಾಗಿದ್ದು, ಬಡಕಬೈಲ್, ಜಲಾಲಿಯಾ ಹಯಾತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿಗಳು ಶೇಕಡಾ ನೂರು ಫಲಿತಾಂಶ ದೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಬಂಟ್ವಾಳ ರೇಂಜ್ ಮಟ್ಟದಲ್ಲೂ ಮೇಲುಗೈ ಸಾಧಿಸಿದ್ದಾರೆ.
ಬಂಟ್ವಾಳ ರೇಂಜ್ ಮಟ್ಟದಲ್ಲಿ
ಏಳನೇ ತರಗತಿಯ ಇಲ್ಹಾಮ್ ಫಾತಿಮಾ (D/O ಇಬ್ರಾಹಿಂ ಖತ್ತರ್) ಪ್ರಥಮ ಹಾಗೂ ಫಾತಿಮಾ ರಿಶಾನಾ (D/O ಅಬ್ದುರ್ರಹ್ಮಾನ್ ) ದ್ವಿತೀಯ
ಮತ್ತು ಹತ್ತನೇ ತರಗತಿಯ ಆಯಿಷಾ ಲುಬಾಬ (D/O ಮರ್ಹೂಂ ಹಮೀದ್) ಪ್ರಥಮ ಹಾಗೂ ಫಾತಿಮಾ ತ್ವಬೀಬಾ (D/O ಜುನೈದ್) ದ್ವಿತೀಯ ಸ್ಥಾನ ಪಡೆದು ನಾಡಿನ ಹಿರಿಮೆಗೆ ಪಾತ್ರರಾಗಿದ್ದಾರೆ.
ಪರೀಕ್ಷೆ ಎದುರಿಸಿ ಯಶಸ್ಸಿಗೆ ಕಾರಣಕರ್ತರಾದ ವಿದ್ಯಾರ್ಥಿಗಳು, ತರಬೇತಿ ನೀಡಿದ ಅಧ್ಯಾಪಕ ವೃಂದ ಹಾಗೂ ಪ್ರೋತ್ಸಾಹಿಸಿದ ಪೋಷಕರಿಗೆ ಬದ್ರಿಯಾ ಜುಮಾ ಮಸೀದಿ ಮತ್ತು ಹಯಾತುಲ್ ಇಸ್ಲಾಂ ಮದ್ರಸ ಸಮಿತಿ ಜಲಾಲಿಯಾ, ಬಡಕಬೈಲ್ ಹೃದಯಾಂತರಾಳದ ಅಭಿನಂದನೆಗಳನ್ನು ಸಲ್ಲಿಸಿದೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?