ವೆರಾವಲ್: ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯ ವೆರಾವಲ್ನಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ದರ್ಗಾದ ಮೇಲೆ ಕೇಸರಿ ಧ್ವಜ ಹಾರಿಸಿದ ಆರೋಪದಲ್ಲಿ 30 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೆರಾವಲ್ನ ವಖಾರಿಯಾ ಬಜಾರ್ನ ದರ್ಗಾದ ಮೇಲೆ ಕೇಸರಿ ಧ್ವಜ ಹಾರಿಸಲಾಗಿತ್ತು. ಕೃತ್ಯದಲ್ಲಿ ಶಾಮೀಲಾದ ಹಲವರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿದ್ದರು ಎಂದು ಗಿರ್ ಸೋಮನಾಥದ ಎಸ್ಪಿ ಮನೋಹರ ಸಿನ್ಹ ಜಡೇಜ ಹೇಳಿದ್ದಾರೆ.
‘ವಿಡಿಯೊ ವೈರಲ್ ಆಗುತ್ತಿದ್ದಂತೆ ಎರಡೂ ಕೋಮಿನವರು ಶನಿವಾರ ರಾತ್ರಿ ಗುಂಪುಗೂಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ನಡೆಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ಅನುಮತಿ ಪಡೆಯದೇ ಮೆರವಣಿಗೆ ನಡೆಸಲಾಗಿತ್ತು. ಘಟನೆಗೆ ಸಂಬಂಧಿಸಿ ಎರಡು ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ