ಮಂಗಳೂರು: ಮುಸ್ಲಿಮರು ಕಲ್ಲು ತೂರುವ ಸಂಸ್ಕೃತಿಯ ವರು,ಅವರ ಮನಸ್ಥಿತಿ ಬದಲಾಗೇಕಿದೆ,ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿ ಗಲಭೆಗೆ ಪ್ರಚೋದನೆ ಆದದ್ದು, ದುಷ್ಕರ್ಮಿ ಯುವಕನ, ಮುಸ್ಲಿಮ್ ಧರ್ಮದ ಆರಾಧನಾ ಕೇಂದ್ರದ ಮೇಲಿನ ದ್ವಜ ಸ್ಥಾಪನೆ ಎಂಬ ನಿಂದನಾತ್ಮಕ ಸಾಮಾಜಿಕ ಜಾಲ ತಾಣ ಪೋಸ್ಟ್ ಚಿತ್ರವಾಗಿದೆ. ಪೊಲೀಸರು ಕ್ಲಪ್ತ ಸಮಯಕ್ಕೆ ಕ್ರಮ ಕೈಗೊಂಡಿದ್ದರೆ, ಹುಬ್ಬಳಿ ಸ್ಥಿತಿ ಈ ಮಟ್ಟಕ್ಕೆ ಹೋಗುತ್ತಿರಲಿಲ್ಲ.ಆದರೆ,ಹುಬ್ಬಳಿಯ ಕೇಶವ ಕುಂಜ ಅಣತಿಯಂತೆ, ಯೋಜನೆ ಬೇರೆಯೇ ತಯಾರಾಗಿದ್ದು, ಅಲ್ಲಿನ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಏನು ಗೊತ್ತು.
ಅಂದು ಗುಂಪಿನಲ್ಲಿ ಸೇರಿಕೊಂಡ ಸಂಘ ಪ್ರೇರಿತ ಹಿಂದುಳಿದ ವರ್ಗದ ಪುಂಡ ಹುಡುಗರು ಘಟನಾ ಸ್ಥಳದಲ್ಲಿ ಪೂರ್ವ ಯೋಜಿತ ರೀತಿಯಲ್ಲಿಯೇ ಕಲ್ಲು ಬಿಸಾಡಿದ್ದನ್ನು, ಇಂದು ತನಿಖೆ ನಡೆಯುತ್ತಿದೆ. ನೈಜ ಕೃತ್ಯ ಬಹಿರಂಗವಾಗಲಿ. ಪ್ರತಾಪ್ ಸಿಂಹ ಏನೋ ತುರ್ತು ಸ್ಥಿಯಲ್ಲಿದ್ದಾರೆ. ಬಹುಷ ಮೈಸೂರಿನ ಮಾಧವ ಕೃಪಾ ಅಣತಿ ಬಂದಿರಬೇಕು. ಪ್ರತಾಪ್ ಸಿಂಹ ಕೃಪಾ ಪ್ರೇರಿತ ಹೇಳಿಕೆ ನೀಡಿ ಮುಸ್ಲಿಮರ ಚಿಂತನೆಯನ್ನು ಬದಲಿಸಲು ಹೊರಟಿದ್ದಾರೆ.
ಸಿಂಹ ತಿಳಿಯಲಿ, ಈ ದೇಶದ ಮುಸ್ಲಿಮರು ಚಿಂತಿಸಿಯೇ ಈ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಜೀವವನ್ನು ಬಲಿ ನೀಡಿದ್ದಾರೆ. ಅಗತ್ಯ ಬಿದ್ದರೆ ಈ ದೇಶದ ಸಂವಿಧಾನದ ಉಳಿವಿಗೆ ಕೂಡಾ ಜೀವ ಬಲಿ ನೀಡಲು ಸಿದ್ಧರಿದ್ದಾರೆ. ಡಾ. ಬೀ.ಆರ್.ಅಂಬೇಡ್ಕರ್,ಮಹಾತ್ಮಾ ಗಾಂಧಿ, ಮೌಲಾನ ಅಬುಲ್ ಕಲಾಂ ಅಜಾದ್, ಬಸವಣ್ಣ, ಕೆಂಪೇಗೌಡ, ಹಜ್ರತ್ ಟಿಪ್ಪು ಸುಲ್ತಾನ್, ಕುವೆಂಪು, ದೊರೆಸ್ವಾಮಿ, ದೇವರಾಜ ಅರಸ್, ಸ್ವಾಮಿ ವಿವೇಕಾನಂದರು, ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಮುಂತಾದ ಸಾಮಾಜಿಕ ಸುಧಾರಕರು ಹಾಕಿ ಕೊಟ್ಟ ನೈತಿಕ ಪ್ರತಿಪಾದನೆ ಯಿಂದ ಈ ದೇಶದ ಮುಸ್ಲಿಮರು, ಹಿಂದುಳಿದ ವರ್ಗ, ಪರಿಶಿಷ್ಟರು, ಬುಡಕಟ್ಟು ಜನರು ಅನಾದಿ ಕಾಲದಿಂದ ತಮ್ಮ ಮನಸ್ಥಿತಿಯನ್ನು ಪಾಲನೆ ಮಾಡಿ ಸೌಹಾರ್ದ ಪರಂಪರೆ ಮೆರೆದಿದ್ದಾರೆ. ಮುಸ್ಲೀಮರ ಚಿಂತನಾ ಲಹರಿ ಸಮರ್ಪಕವಾಗಿ ಯೇ ಇದೆ. ಬದಲಾಗ ಬೇಕಾದುದು ಪ್ರತಾಪ್ ಸಿಂಹ ರಂತಹ, ಮಾಧವಾ ಕೃಪಾ ಲಿಖಿತ ಹೇಳಿಕೆ ನೀಡುವ ವ್ಯಕ್ತಿಗಳದ್ದು ಎಂದು ಆರಿಯಲಿ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?