ವರದಿ: ಅದ್ದಿ ಬೊಳ್ಳೂರು
ಹಳೆಯಂಗಡಿ,ಏ.22:ಮಾರುತಿ ಓಮ್ನಿ ಕಾರೊಂದು ಎಕ್ಸ್ಪ್ರೆಸ್ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ತಡರಾತ್ರಿ ಸುಮಾರು ಹನ್ನೊಂದು ಗಂಟೆಯ ವೇಳೆ ಹಳೆಯಂಗಡಿಯ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ, ಮೃತರನ್ನು ಮುಕ್ಕ ಪಡ್ರೆ ನಿವಾಸಿಗಳಾದ ಭುಜಂಗ(62) ಹಾಗೂ ವಸಂತ್(55) ಎಂದು ಗುರುತಿಸಲಾಗಿದ್ದು. ಕಾರು ಚಾಲಕ ಬಾಲಕೃಷ್ಣ ಸಹ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಓಮ್ನಿ ಕಾರು ಹಳೆಯಂಗಡಿ ಒಳ ರಸ್ತೆಯಿಂದ ಪಾವಂಜೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವಾಗ ಮಂಗಳೂರಿನಿಂದ ಬರುತ್ತಿದ್ದ ಎಕ್ಸ್ಪ್ರೆಸ್ ಬಸ್ಸಿಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮಂಗಳೂರು ಉತ್ತರ ವಲಯದ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ ನಿಯಂತ್ರಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ