ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್ ಚಾಲಿಸಾ ಪಠಣ ಮಾಡ್ತೀವಿ ಎಂದಿದ್ದೇ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಶಾಸಕ ರವಿ ರಾಣ ವಿರುದ್ಧ ಶಿವಸೇನೆ ಸರ್ಕಾರ ದೇಶದ್ರೋಹ ಕೇಸ್ ದಾಖಲಿಸಿದೆ.
ನಗರದಲ್ಲಿ ಇಂದು ನಡೆದ ದೊಡ್ಡ ಬೆಳವಣಿಗೆಯಲ್ಲಿ ಮಾಜಿ ನಟಿ, ಲೋಕಸಭೆ ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ಅವರಿಗೆ ಬಾಂದ್ರಾ ನ್ಯಾಯಾಲಯದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇತ್ತ ಸರ್ಕಾರ ಮತ್ತು ಮುಖ್ಯಮಂತ್ರಿಯ ವಿರುದ್ಧ ದ್ವೇಷ ಹರಡುವ ಕಾರಣಕ್ಕಾಗಿ ಅವರ ವಿರುದ್ಧ ಸೆಕ್ಷನ್ 124 ಎ ಅನ್ವಯ ದೇಶದ್ರೋಹ ಪ್ರಕರಣವನ್ನು ದಾಖಲಿಸಿದೆ.
ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣ ವಿವಾದದ ಕುರಿತಂತೆ ಎಂಪಿ ನವನೀತ್ ಕೌರ್ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಎರಡು ಸಮುದಾಯಗಳ ನಡುವೆ ದ್ವೇಷ ಹರಡಿಸುವ ಆರೋಪದ ಅಡಿ ಈಗಾಗಲೇ ನವನೀತ್ ಕೌರ್ ಹಾಗೂ ಅವರ ಪತಿ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ ಎಂದು ಎರಡು ವರ್ಗಗಳ ನಡುವೆ ಧ್ವೇಷ ಉಂಟು ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಾಂಬೆ ಪೊಲೀಸ್ ಕಾಯ್ದೆಯ ಸೆಕ್ಷನ್ 153 ಎ, 35, 37, 135 ರ ಅಡಿಯಲ್ಲಿ ಹಾಗೂ ಐಪಿಸಿ ಸೆಕ್ಷನ್ 353 ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಇಂದು ಕೋರ್ಟ್ಗೆ ಇಬ್ಬರನ್ನು ಪೊಲೀಸರು ಹಾಜರು ಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಪೀಠ, ಜಾಮೀನು ಅರ್ಜಿಯನ್ನು ಏಪ್ರಿಲ್ 29 ರಂದು ವಿಚಾರಣೆ ಮಾಡೋದಾಗಿ ತಿಳಿಸಿ 27ರ ಒಳಗೆ ಪೊಲೀಸರಿಗೆ ಜಾಮೀನು ಅರ್ಜಿಯನ್ನು ತಿರಸ್ಕರಿಸಲು ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿತ್ತು. ಆ ಬಳಿಕ ದಂಪತಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ವಿಚಾರಣೆ ಮುಂದೂಡಿತ್ತು. ಸದ್ಯ ಅಮರಾವತಿ ಸಂಸದೆಯನ್ನ ಬೈಕುಲ್ಲಾ ಜೈಲು ಹಾಗೂ ಶಾಸಕರನ್ನು ಆರ್ಥರ್ ರೋಡ್ ಜೈಲಿಗೆ ಕಳುಹಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ