ಬೆಂಗಳೂರು: ಇಂಟರ್ನೆಟ್ ಕರೆಯ ಮೂಲಕ ನನಗೆ ಬೆದರಿಕೆ ಹಾಕ್ತಾರೆ. ನನಗೆ ಕೊಟ್ಟಿರುವ ಸೆಕ್ಯೂರಿಟಿ ವ್ಯವಸ್ಥೆಯನ್ನ 3 ವರ್ಷಗಳ ಹಿಂದೆಯೆ ತೆಗೆಯಲಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಗಾಂಧಿಗೆ ತನಿಖಾಧಿಕಾರಿಗಳು ನೋಟಿಸ್ ನೀಡಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಬೆಂಗಳೂರಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ತಮಗೆ ಬೆದರಿಕೆ ಇರುವ ಬಗ್ಗೆ ಪ್ರಿಯಾಂಕ್ ಗಾಂಧಿ ಮಾಹಿತಿ ನೀಡಿದರು.
ಸರ್ಕಾರದ ಅಸಮರ್ಥತೆಗೆ ಈ ನೋಟೀಸ್ ಸಾಕ್ಷಿ
ಈ ಸಂಬಂಧ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ನಾನೇ ಭೇಟಿ ಮಾಡಿದ್ದೆ. ಸೆಕ್ಯೂರಿಟಿ ಬಗ್ಗೆ ಆಗ ಕೇಳಿದ್ದೆ. ಆದರೆ ನನಗೆ ಯಾವ ಸೆಕ್ಯೂರಿಟಿಯನ್ನೂ ಕೊಟ್ಟಿಲ್ಲ. ಕಳೆದ ಬಾರಿ ಬೆದರಿಕೆ ಕರೆಯ ಬಗ್ಗೆ ತನಿಖೆ ನಡೆದಾಗ ಅಮೆರಿಕ ಸರ್ವರ್ ವರೆಗೆ ಹೋಗಿ ಎಂಡ್ ಆಯ್ತು. ಅದರ ನಂತರ ಮೂಲ ಸಿಕ್ಕಿಲ್ಲ ಎಂದರು. ನಾನೂ ಸಹ ಹೋಗಲಿ ಬಿಡ್ರಪ್ಪ ಅಂದೆ, ಈಗ ಕಂಪ್ಲೆಂಟ್ ಕೊಟ್ಟರೂ ಇಷ್ಟೇ ಆಗೋದು ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಸಿಐಡಿ ನೋಟಿಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿನ್ನೆ ಸಂಜೆ ನನ್ನ ಮನೆಗೆ ಸಿಐಡಿಯವರು ಒಂದು ನೋಟೀಸ್ ಕೊಟ್ಟು ಹೋಗಿದ್ದಾರೆ. ಆ ನೋಟೀಸ್ನಲ್ಲಿ ಬಹಳಷ್ಟು ವಿಚಾರ ಪ್ರಸ್ತಾಪಿಸಿದ್ದಾರೆ. ಪಿಎಸ್ಐ ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳಿವೆ ಎಂದು ನೀವು ಹೇಳಿದ್ದೀರಿ, ಆ ದಾಖಲೆಗಳ ಸಲ್ಲಿಸಿ ಎಂದಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಈ ನೋಟೀಸ್ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ