ದೋಹಾ : ಕೆಸಿಎಫ್ ಕತ್ತರ್ ರಾಷ್ಟ್ರೀಯ ಸಮಿತಿ ವತಿಯಿಂದ ಬೃಹತ್ ಇಫ್ತಾರ್ ಸಂಗಮವು 23-04-2022 ರಂದು ಸ್ವಾಗತ ಸಮಿತಿ ಚೇರ್ಮಾನ್ ಇಸ್ಹಾಕ್ ನಿಝಾಮಿಯವರ ಅಧ್ಯಕ್ಷತೆಯಲ್ಲಿ ದೋಹಾದಲ್ಲಿ ನಡೆಯಿತು. ಹಾಫಿಲ್ ಉಮರುಲ್ ಫಾರೂಖ್ ಸಖಾಫಿ ಹಾಗೂ ಆಸಿಫ್ ಅಹ್ಸನಿ ಅಲ್’ ಅನ್ವಾರಿಯವರ ನೇತೃತ್ವದಲ್ಲಿ ನಡೆದ ಮಹ್’ಳರತುಲ್ ಬದ್ರಿಯಾ ಮಜ್ಲಿಸ್ ಮೂಲಕ ಚಾಲನೆಗೊಂಡ ಈ ಕಾರ್ಯಕ್ರಮವನ್ನು ICF ಕತ್ತರ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ಬಶೀರ್ ಪುತ್ತುಪಾಡಮ್ ರವರು ಉದ್ಹಾಟಿಸಿದರು. ಪ್ರಮುಖ ಅತಿಥಿಯಾಗಿ ಆಗಮಿಸಿರುವ ಬಹುl ಅಸ್ಸಯ್ಯಿದ್ ನಿಝಾಮುದ್ದೀನ್ ಬಾಫಖೀ ತಂಙಳ್ ರವರು ದುಆ ನೆರವೇರಿಸಿಕೊಟ್ಟರು.


ICF ಹಾಗೂ RSC ಮುಂತಾದ ಕೆಸಿಎಫ್ ನ ಸಹೋದರ ಸಂಘಟನೆಗಳ, ಕತ್ತರ್ ರಾಷ್ಟ್ರೀಯ ನೇತಾರರುಗಳ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ICF ರಾಷ್ಟ್ರೀಯ ಸಮಿತಿ ದ’ಅ್’ವಾ ವಿಭಾಗದ ಚೇರ್ಮಾನ್, ಅಹ್ಮದ್ ಸಖಾಫಿ ಪೇರಾಂಬ್ರ, ICF ರಾಷ್ಟ್ರೀಯ ಸಮಿತಿ ಪಬ್ಲಿಶಿಂಗ್ ವಿಭಾಗದ ಕನ್ವೀನರ್ ನೌಷಾದ್ ಸಾಹಿಬ್ ಅದಿರುಮಡ, RSC ರಾಷ್ಟ್ರೀಯ ಸಮಿತಿ ಕನ್ವೀನರ್ ಮೊಹಮ್ಮದ್ ಶಫೀಖ್ ಕನ್ನಪುರಂ ರವರುಗಳು ಮಾತನಾಡಿ, ಬೃಹತ್ತಾದ ಈ ಇಫ್ತಾರ್ ಸಂಗಮದಲ್ಲಿ ಸೇರಿರುವ ಕಾರ್ಯಕರ್ತರನ್ನು ಅಭಿನಂದಿಸಿದರು.
SSF ಸಹಯೋಗದೊಂದಿಗೆ ಉತ್ತರ ಕರ್ನಾಟಕದಾದ್ಯಂತ ಕೆಸಿಎಫ್ .ನಡೆಸುತ್ತಿರುವ ದೀನೀ ಕಾರ್ಯಚಟುವಟಿಕೆಗಳ ಬಗ್ಗೆ ಕಿರು ಡಾಕ್ಯುಮೆಂಟರಿ ವೀಡಿಯೋವೊಂದನ್ನು ಪ್ರದರ್ಶಿಸಿ, ಕಡುಬಡತನದೊಂದಿಗೆ, ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳಿಂದ ವಂಚಿತರಾಗಿದ್ದ ಸಮಾಜವೊಂದನ್ನು ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಮತ್ತು ಆರ್ಥಿಕವಾಗಿ ಸರ್ವತೋಮುಖ ಅಭಿವೃದ್ಧಿಯತ್ತ ಮುನ್ನಡೆಸುತ್ತಾ ಕ್ರಾಂತಿಕಾರಿಯಾಗಿ ಕಾರ್ಯಾಚರಿಸುತ್ತಿರುವ ಕೆಸಿಎಫ್ ನ ಕಾರ್ಯವೈಖರಿಗಳ ಬಗ್ಗೆ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ನಾಯಕರಾಗಿರುವ ಹಾಫಿಲ್ ಉಮರುಲ್ ಫಾರೂಖ್ ಸಖಾಫಿಯವರು ವಿವರಣೆಯನ್ನು ನೀಡಿದರು.
ಕೆಸಿಎಫ್ ಕತ್ತರ್ ರಾಷ್ಟ್ರೀಯ ಸಮಿತಿ ನೇತಾರರುಗಳಾದ ಕೋಶಾಧಿಕಾರಿ ಕಬೀರ್ ದೇರಳಕಟ್ಟೆ, ಇಹ್ಸಾನ್ ವಿಭಾಗದ ಚೇರ್ಮಾನ್ ಮುನೀರ್ ಮಾಗುಂಡಿ, ಸಂಘಟನಾ ವಿಭಾಗದ ಚೇರ್ಮಾನ್ ಹನೀಫ್ ಪಾತೂರು ಹಾಗೂ ಶಿಕ್ಷಣ ವಿಭಾಗದ ಚೇರ್ಮಾನ್ ಸತ್ತಾರ್ ಅಶ್ರಫಿ ಮಠರವರುಗಳು ಉಪಸ್ಥಿತರಿದ್ದರು. ಹಸನ್ ಪೂಂಜಾಲ್ ಕಟ್ಟೆ, ಸಿದ್ದೀಖ್ ಕೃಷ್ಣಾಪುರ, ಫಾರೂಖ್ ಕೃಷ್ಣಾಪುರ, ಮಿರ್ಶಾದ್ ಕನ್ಯಾನ, ಅಶ್ರಫ್ ಕಾವಳ್’ಕಟ್ಟೆ, ಇಸ್ಮಾಯಿಲ್ ಉಪ್ಪಳ್ಳಿ ಮುಂತಾದ ಕೆಸಿಎಫ್ ರಾಷ್ಟ್ರೀಯ ಸಮಿತಿ ನಾಯಕರುಗಳು, ಇಫ್ತಾರ್ ವ್ಯವಸ್ಥೆಗಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಯಾಚರಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕಾರಿಯಾಗಿತ್ತು.
ಕೆಸಿಎಫ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಹಂಡುಗುಳಿಯವರು ಸ್ವಾಗತಿಸಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಇಫ್ತಾರ್ ಸಂಗಮ ಸ್ವಾಗತ ಸಮಿತಿ ಕನ್ವೀನರ್ ಆಗಿದ್ದ ಬಶೀರ್ ಉಪ್ಪಳ್ಳಿಯವರು ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ