ಬೆಂಗಳೂರು,ಏ.30: ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು. ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್ ಗಳನ್ನು ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು ಎಂದು ಹೇಳಿದರು.
ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ. ಪಿಎಸ್ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದರು.
ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ? ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಫೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್ ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೆ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್ ಐ ನೇಮಕಾತಿ ಅಕ್ರಮ ಸಾಕ್ಷಿ ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ